Site icon Suddi Belthangady

ಬೆಳ್ತಂಗಡಿ ಶ್ರೀ ಗುರುನಾರಾಯಣ ಸಂಘದಲ್ಲಿ ವರಮಹಾಲಕ್ಷ್ಮಿ ಪೂಜೆ

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಬಿಲ್ಲವ ಮಹಿಳಾ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ, ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಗುರುನಾರಾಯಣ ಸಭಾ ಭವನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಿತು.

ಮಹಿಳಾ ಬಿಲ್ಲವ ಸದಸ್ಯರ ನೇತೃತ್ವದಲ್ಲಿ ಲಲಿತ ಸಹಸ್ರನಾಮ ಮತ್ತು ಶ್ರೀ ದೇವೀ ಅಷ್ಟೋತ್ತರ ಪಾರಾಯಣ ಹಾಗೂ ಭಜನಾ ಕಾರ್ಯಕ್ರಮ ಜರಗಲಿರುವುದು.ರಘುನಾಥ ಶಾಂತಿ ಪೂಜಾ ವಿಧಿ ವಿಧಾನ ನೆರವೇರಿಸಿದರು.

ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಸುಜಿತಾ ವಿ. ಬಂಗೇರ, ಕಾರ್ಯದರ್ಶಿ ಶಾಂಭವಿ ಬಂಗೇರ, ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ಡಕ್ಕ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ನಿತೀಶ್ ಕೋಟ್ಯಾನ್, ಮಹಿಳಾ ಬಿಲ್ಲವ ವೇದಿಕೆ ನಿಕಟ ಪೂರ್ವ ಅಧ್ಯಕ್ಷೆ ರಾಜಶ್ರೀ ರಮಣ್, ಮಾಜಿ ಅಧ್ಯಕ್ಷರುಗಳಾದ ವಿನೋದಿನಿ ರಾಮಪ್ಪ, ಪ್ರೇಮಾ ಉಮೇಶ್, ತನುಜಾ ಶೇಖರ್, ಪದಾಧಿಕಾರಿಗಳು ಸದಸ್ಯರು
ಸಂಘದ ಮಾಜಿ ಅಧ್ಯಕ್ಷ ಭಗೀರಥ.ಜಿ, ಯುವ ಬಿಲ್ಲವ ವೇದಿಕೆ ಮಾಜಿ ಅಧ್ಯಕ್ಷ ಚಿದಾನಂದ ಇಡ್ಯಾ, ನಿರ್ದೇಶಕರುಗಳಾದ ಗೋಪಾಲ ಪೂಜಾರಿ, ಲಕ್ಷ್ಮಣ ಪೂಜಾರಿ, ಪ್ರೇಮಾ ಉಮೇಶ್, ಯಶೋಧ ಕುತ್ಲೂರು ಹಾಜರಿದ್ದರು.

Exit mobile version