Site icon Suddi Belthangady

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಧರ್ಮಸ್ಥಳ-ನಾರಾವಿ ಹೆದ್ದಾರಿಗೆ ಸರ್ಕಾರಿ ಬಸ್ ತಡೆ ಹಿಡಿದಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಪ್ರತಿಭಟನೆ

ಬೆಳ್ತಂಗಡಿ: ತಾಲೂಕಿನ ನಾರಾವಿ ಅಳದಂಗಡಿ ಈ ಭಾಗದಿಂದ ತಾಲೂಕಿನ ಶಾಲಾ ಕಾಲೇಜಿಗೆ ಹಲವಾರು ವಿದ್ಯಾರ್ಥಿಗಳು ಬರುತ್ತಿದ್ದು, ಇವರು ಸರ್ಕಾರಿ ಬಸ್ಸಿನ ಸಮಸ್ಯೆಯನ್ನು ಎದುರಿಸುತ್ತಿದ್ದು, ಇದಕ್ಕೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸರ್ಕಾರಿ ಬಸ್ಸಿಗೆ ಮನವಿ ನೀಡಿದ್ದು ಇದಕ್ಕೆ ಸರಿಯಾಗಿ ಸರ್ಕಾರಿ ಬಸ್ಸಿನ ವ್ಯವಸ್ಥೆಗೆ ಆದೇಶ ಹೊರಡಿಸಿದ್ದು, ಇದೀಗ ರಾಜ್ಯ ಸರ್ಕಾರ ಬಸ್ಸಿನ ತಡೆ ಹಿಡಿದಿರುವ ಕಾರಣ ಈ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದರು.

ತಾಲೂಕು ಸಂಚಾಲಕ ಸುವಿತ್ ಶೆಟ್ಟಿ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ಬಳಿಕ ನಿಯಂತ್ರಣಾಧಿಕಾರಿ ತಿಮ್ಮಪ್ಪ ರವರಿಗೆ ಮನವಿ ನೀಡಿದರು.ಶೀಘ್ರದಲ್ಲಿ ವ್ಯವಸ್ಥೆ ಮಾಡಿಕೊಡುವುದಾಗಿ ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಹಲವಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

Exit mobile version