ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ರೂ.90.96 ಲಕ್ಷ ನಿವ್ವಳ ಲಾಭ, ಶೇ.12% ಡಿವಿಡೆಂಟ್ ಘೋಷಣೆ ಶಾಸಕ ಹರೀಶ್ ಪೂಂಜ ಸೇರಿದಂತೆ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

0

ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪಡಂಗಡಿ ಇದರ ವಾರ್ಷಿಕ ಮಹಾಸಭೆಯು ಸೊಸೈಟಿಯ ಸಭಾಂಗಣದಲ್ಲಿ ಆ.26ರಂದು ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಪಡಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಂತೋನಿ ಫೆರ್ನಾಂಡೀಸ್ ವಹಿಸಿದ್ದರು.

ವೇದಿಕೆಯಲ್ಲಿ ಸಿಎ ಬ್ಯಾಂಕ್‌ ಉಪಾಧ್ಯಕ್ಷ ನರೇಂದ್ರ ಕುಮಾರ್, ನಿರ್ದೇಶಕರಾದ ನಾರಾಯಣ ಮೂಲ್ಯ, ಸಂತೋಷ್ ಶೆಟ್ಟಿ, ರವಿಕುಮಾರ್ ಕೆ.ವೈ, ಪದ್ಮನಾಭ ನಾಯ್ಕ ಸಿ.ಸಿ., ಕೃಷ್ಣಪ್ಪ ಪೂಜಾರಿ, ಉಮೇಶ, ಉಷಾ, ಸುನಂದ, ನವೀನ್, ವಲಯ ಮೇಲ್ವಿಚಾರಕ ಸಂದೇಶ ಉಪಸ್ಥಿತರಿದ್ದರು.

ವಾರ್ಷಿಕ ಮಹಾಸಭೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಎರಡನೇ ಭಾರಿ ಆಯ್ಕೆಯಾದ ಹರೀಶ್ ಪೂಂಜರವರನ್ನು, ಸಹಕಾರಿ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಪಡಂಗಡಿ ಗ್ರಾ.ಪಂ ನೂತನ ಅಧ್ಯಕ್ಷ ಪ್ರಶಾಂತ್ ಸುವರ್ಣ, ಉಪಾಧ್ಯಕ್ಷೆ ವಸಂತಿ, ನಿವೃತ್ತ ಅಂಚೆ ಪಾಲಕ ಪೂವಪ್ಪ ಪೂಜಾರಿಯವರನ್ನು ಸನ್ಮಾನಿಸಲಾಯಿತು. ಹಾಗೂ ಉತ್ತಮ ಅಂಕಗಳಿಸಿದ ಸ್ಥಳೀಯ ಶಾಲಾ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಹಾಗೂ ಸ್ಥಳೀಯ ಶಾಲೆಯ ಗ್ರಂಥಾಲಯದ ಪುಸ್ತಕ ಜೋಡನೆಗೆ ಸಹಕಾರ ನೀಡಿದರು.ಪಡಂಗಡಿ ಸಿಎ ಬ್ಯಾಂಕ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುಕೇಶಿನಿ ಎ. ವಾರ್ಷಿಕ ವರದಿಯನ್ನು ಮಂಡಿಸಿದರು.ಅಧ್ಯಕ್ಷ ಅಂತೋನಿ ಫೆರ್ನಾಂಡಿಸ್ ಸ್ವಾಗತಿಸಿದರು.ಸರ್ವ ಸದಸ್ಯರು ಸಹಕರಿಸಿದರು.ಶಿಕ್ಷಕ ಶಿವಶಂಕರ್ ಭಟ್ ಕಾರ್ಯಕ್ರಮ ನಿರೂಪಿಸಿದರು.

ಸಂಘದ ಸಿಬ್ಬಂದಿಗಳಾದ ಸುಜಯ, ಉಮೇಶ್, ಆನಂದ, ರಂಜಿತ್ ಸಹಕರಿಸಿದರು.ನಿರ್ದೇಶಕ ರವಿಕುಮಾರ್ ಕೆ.ವೈ ವಂದಿಸಿದರು.

LEAVE A REPLY

Please enter your comment!
Please enter your name here