Site icon Suddi Belthangady

ಕೊಯ್ಯೂರು: ಸ.ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

ಕೊಯ್ಯೂರು: ಸರಕಾರಿ ಪದವಿ ಪೂರ್ವ ಕಾಲೇಜು ಕೊಯ್ಯೂರು ಇದರ 2023-24ನೇ ಸಾಲಿನ ವಿದ್ಯಾರ್ಥಿ ಸಂಘ ಹಾಗೂ ಸಹಸಂಘಗಳಾದ ಸಾಹಿತ್ಯ ಸಂಘ, ಮಾನವಿಕ ಸಂಘ, ವಾಣಿಜ್ಯ ಸಂಘಗಳ ಉದ್ಘಾಟನಾ ಸಮಾರಂಭ ಆ.25ರಂದು ನೆರವೇರಿತು.ಕ್ಯಾಂಪ್ಕೋ ಲಿಮಿಟೆಡ್ ಮಂಗಳೂರು ಇದರ ಪ್ರಾದೇಶಿಕ ವ್ಯವಸ್ಥಾಪಕ ಚಂದ್ರ ಕೆ. ಎಂ. ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿ ಮಾತನಾಡಿದರು.

ಕಾಲೇಜಿನ ಪ್ರಾಚಾರ್ಯ ಬಾಲಕೃಷ್ಣ ಬೇರಿಕೆ ಅಧ್ಯಕ್ಷತೆ ವಹಿಸಿದ್ದರು.ಕ್ಯಾಂಪ್ಕೋ ಲಿಮಿಟೆಡ್ ಬೆಳ್ತಂಗಡಿ ಶಾಖಾ ವ್ಯವಸ್ಥಾಪಕ ಕೃಷ್ಣ ಭಟ್, ಸಿಬ್ಬಂದಿ ಅಶೋಕ್, ರಾಜ್ಯಶಾಸ್ತ್ರ ಉಪನ್ಯಾಸಕಿ ಶಿಲ್ಪಾ ಡಿ., ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಿ. ವಿ. ರಕ್ಷಿತ್, ಕಾರ್ಯದರ್ಶಿ ಆಯಿಷತು ರಾಬಿಹ ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರಾದ ಪವನ್ಯ, ಮೇಘನಾ, ಹಾಯ ಫಾತಿಮಾ, ರಂಜೀನಾ, ಭವ್ಯಾ ಪ್ರಾರ್ಥಿಸಿದರು.ಉಪನ್ಯಾಕಿ ಶಿಲ್ಪಾ ಡಿ. ಸ್ವಾಗತಿಸಿ, ಇತಿಹಾಸ ಉಪನ್ಯಾಸಕ ಲಕ್ಷಣ ಗೌಡ ಕೆ. ಮತ್ತು ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಪ್ರೀತಿ ಎನ್. ಕಾರ್ಯಕ್ರಮ ನಿರ್ವಹಿಸಿದರು.ಅರ್ಥಶಾಸ್ತ್ರ ಉಪನ್ಯಾಸಕಿ ತೃಪ್ತಿ ಪಿ. ಜಿ. ವಂದಿಸಿದರು.ಉಪನ್ಯಾಸಕ ಸಂತೋಷ್ ಕುಮಾರ್ ಸಹಕರಿಸಿದರು.

Exit mobile version