Site icon Suddi Belthangady

ಧರ್ಮಸ್ಥಳದಲ್ಲಿ ಪೊಲೀಸ್ ಸರ್ಪಗಾವಲು

ಬೆಳ್ತಂಗಡಿ: ಕು.‌ಸೌಜನ್ಯಳಿಗೆ ನ್ಯಾಯ ದೊರಕಬೇಕು ಎಂದು ಒತ್ತಾಯಿಸಿ ವಿಶ್ವಹಿಂದೂ ಪರಿಷದ್ ಮತ್ತು ಬಜರಂಗದಳದ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ನಡೆಯುತ್ತಿದೆ.

ಸೌಜನ್ಯ ತಾಯಿ ಕುಸುಮಾವತಿ ಸಹಿತ ಸಾವಿರಾರು ಮಂದಿ‌ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.

ಇನ್ನೊಂದೆಡೆ‌ ಧರ್ಮಸ್ಥಳದ ಉದಯ ಜೈನ್, ಧೀರಜ್‌ ಕೆಲ್ಲ ಮತ್ತು ಮಲ್ಲಿಕ್ ಜೈನ್ ಅವರು ನಮ್ಮ ನಿರಪರಾಧಿತನವನ್ನು ಅಣ್ಣಪ್ಪ ಸ್ವಾಮಿ ಎದುರು ಹೇಳಿಕೊಳ್ಳಲು ನಿರ್ಧರಿಸಿದ್ದು ಸೌಜನ್ಯ ತಾಯಿ ಕುಸುಮಾವತಿಯವರನ್ನೂ ಆಣೆ ಪ್ರಮಾಣಕ್ಕೆ ಆಹ್ವಾನಿಸಿದ್ದಾರೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದ.ಕ. ಎಸ್ಪಿ. ರಿಷ್ಯಂತ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Exit mobile version