ಶ್ರೀ ಗುರುದೇವ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

0

ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿ ಆ.29 ರಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಹಭಾಗಿತ್ವದಲ್ಲಿ ಆಚರಿಸಲಾಯಿತು.


ಖ್ಯಾತ ಕ್ರೀಡಾಪಟು ಧ್ಯಾನ್ ಚಂದ್ ಅವರ ಹುಟ್ಟು ಹಬ್ಬದ ಪ್ರಯುಕ್ತ ನಡೆದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಕಾಲೇಜಿನ ಪ್ರಾಚಾರ್ಯರಾದ ಡಾ.ಸವಿತಾ ಉದ್ಘಾಟಿಸಿ ಶುಭ ಹಾರೈಸಿದರು.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿ ಬಿ.ಎ.ಶಮಿವುಲ್ಲ ಸ್ವಾಗತಿಸಿ ಕ್ರೀಡಾಕೂಟದ ವಿವರಗಳನ್ನು ನೀಡಿದರು.

ವಿದ್ಯಾರ್ಥಿಗಳಿಗೆ ಓಡುವ ಸ್ಪರ್ಧೆ ನಿಂಬೆಹಣ್ಣು ಚಮಚ ಓಟ, ಗೋಣಿ ಚೀಲದ ಓಟ, ಜಿಬಿಲಿ, ಚೆಸ್, ಹಗ್ಗ ಜಗ್ಗಾಟ ಹೀಗೆ ಹತ್ತು ಹಲವಾರು ಕ್ರೀಡೆಗಳನ್ನು ನಡೆಸಲಾಯಿತು.ಸಂಸ್ಥೆಯ ಅಧ್ಯಕ್ಷ ಕೆ.ವಸಂತ ಬಂಗೇರ ರವರು ಆಟೋ ಸ್ಪರ್ಧೆಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.ಕಾಲೇಜಿನ ಉಪನ್ಯಾಸಕರು ವಿವಿಧ ಸ್ಪರ್ಧೆಗಳನ್ನು ನಡೆಸಿಕೊಟ್ಟರು.ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಪವಿತ್ರ ವಂದಿಸಿದರು.

LEAVE A REPLY

Please enter your comment!
Please enter your name here