ಶ್ರೀ ದುರ್ಗಾ ಭಜನಾ ಮಂಡಳಿ ಹನುಮಾನ್ ನಗರ ಬೊಳ್ಳುಕಲ್ಲು- ಹುಟ್ಟುಹಬ್ಬದ ಪ್ರಯುಕ್ತ ಭಜನಾ ಸೇವೆ

0

ಕಳಿಯ: ಶ್ರೀ ದುರ್ಗಾ ಭಜನಾ ಮಂಡಳಿ ಹನುಮಾನ್ ನಗರ ಬೊಳ್ಳುಕಲ್ಲು ಇದರ ಮಂಡಳಿಯಲ್ಲಿ ಕೂಸಪ್ಪ ಗೌಡ ಇವರ ಮೊಮ್ಮಗಳಾದ ಆಭಿಷ ಇವರ ಹುಟ್ಟು ಹಬ್ಬದ ಪ್ರಯುಕ್ತ ಭಜನಾ ಸೇವೆಯು ನಡೆಯಿತು.
ಮಹಾ ಮಂಗಳಾರತಿ ನಂತರ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ವತಿಯಿಂದ ರಕ್ಷಾ ಬಂಧನ ಉಸ್ವಾವ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಕಳಿಯ ಗ್ರಾಮ ಪಂಚಾಯತ್ ಗೆ ನೂತನವಾಗಿ ಆಯ್ಕೆಯಾದ ದಿವಾಕರ ಮೆದಿನ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷ ಜನಾರ್ದನ ಗೌಡ ಕುಳಾಯಿ ಇವರಿಗೆ ಶ್ರೀ ದೇವಿಯ ಪ್ರಸಾದ ಹಾಗೂ ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪ್ರಸನ್ನ ಬೊಳ್ಳುಕಲ್ಲು ಇವರು ಮಂಡಳಿಗೆ ಕೊಡಪಾನ ಹಾಗೂ ಪ್ರಕಾಶ್ ಪೂಜಾರಿ ಬೇರ್ಕೆತ್ತೋಡಿ ಟೇಬಲ್ ಕೊಡುಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಮಂಡಳಿಯ ಪದಾಧಿಕಾರಿಗಳು ಹಾಗೂ ಭಕ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here