ಕೊಕ್ಕಡ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

0

ಕೊಕ್ಕಡ: ಬಯಲು ಗಣಪತಿ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮವು ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಕಾರ್ತಿಕ್ ತಂತ್ರಿಯವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಶ್ರೀ ಮಹಾಗಣಪತಿ ಸೌತಡ್ಕ ಬಯಲು ರಂಗ ಮಂದಿರವನ್ನು ದೇವರಿಗೆ ಸಮರ್ಪಿಸಿದರು.

ಕಾರ್ಯಕ್ರಮದಲ್ಲಿ ಕೊಕ್ಕಡ ಕೆನರಾ ಬ್ಯಾಂಕ್‌ ನವರಿಂದ ಕಂಪ್ಯೂಟರನ್ನು ಕೊಡುಗೆಯಾಗಿ ನೀಡಲಾಯಿತು.

ಈ ಸಂದರ್ಭದಲ್ಲಿ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ದಯಾನಂದ ಹೆಗ್ಡೆ, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳು, ದೇವಳದ ಸಿಬ್ಬಂದಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here