Site icon Suddi Belthangady

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಮತ್ತು ಗ್ರಾಮೀಣ ಕಚೇರಿಯಲ್ಲಿ ಗುರುಜಯಂತಿ ಆಚರಣೆ

ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಮತ್ತು ಗ್ರಾಮೀಣ ಸಮಿತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜನ್ಮದಿನಾಚರಣೆ ಪ್ರಯುಕ್ತ ಗುರುಜಯಂತಿ ಕಾರ್ಯಕ್ರಮವು ಬೆಳ್ತಂಗಡಿ ಸಂತೆಕಟ್ಟೆ ಬಳಿ ಇರುವ ಜೈನ್ ಹೋಟೆಲ್ ಮೇಲೆ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಆ.31ರಂದು ನಡೆಯಿತು.

ಈ ಕಾರ್ಯಕ್ರಮಕ್ಕೆ ಪೀತಾಂಬರ ಹೆರಾಜೆ, ವಕೀಲರಾದ ಭಗೀರಥ ಜಿ., ಕಾನೂನು ಸಲಹೆಗಾರರು ವಕೀಲರಾದ ಸಂತೋಷ್, ಡಿ.ಸಿ.ಸಿ. ಸದಸ್ಯ ಸೆಬಾಸ್ಟಿಯನ್, ಮಾಜಿ ಉಜಿರೆ ಜಿಲ್ಲಾ ಪಂಚಾಯತ್ ಸದಸ್ಯೆ ನಮಿತಾ, ಬ್ಲಾಕ್ ಕಾಂಗ್ರೆಸ್ ಸಮಿತಿ (ನಗರ) ಬೆಳ್ತಂಗಡಿ ಅಧ್ಯಕ್ಷ ಸತೀಶ್ ಕೆ. ಬಂಗೇರ ಕಾಶಿಪಟ್ನ, ಬ್ಲಾಕ್ ಕಾಂಗ್ರೆಸ್ ಸಮಿತಿ (ಗ್ರಾಮೀಣ) ಬೆಳ್ತಂಗಡಿ ಕೆ.ಎಮ್ ನಾಗೇಶ್ ಕುಮಾರ್ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.ಕೆ.ಎಂ.ನಾಗೇಶ್ ಅಧ್ಯಕ್ಷತೆ ವಹಿಸಿದ್ದರು.

ಪದ್ಮನಾಭ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿದರು.ಹರಿಶ್ ಸಾಲಿಯಾನ್ ವಂದಿಸಿದರು.

Exit mobile version