ಬೆಳ್ತಂಗಡಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ ವತಿಯಿಂದ 352ನೇ ಆರಾಧನಾ ಮಹೋತ್ಸವ

0

ಬೆಳ್ತಂಗಡಿ: ಬೆಳ್ತಂಗಡಿಯ ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವ ಸೆ.1 ರಂದು ಪ್ರಾರಂಭಗೊಂಡಿತು ಉದ್ಘಾಟನೆಯನ್ನು ದೀಪ ಪ್ರಜ್ವಲನೆಯ ಮುಖಾಂತರ ಉದ್ಯಮಿ ಮೋಹನ್ ದಾಸ್ ಕೋರ್ನಾಯ ರವರು ನೆರವೇರಿಸಿದರು. ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪಿತಾಂಬರ ಹೇರಾಜೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉದ್ಯಮಿ ಪೃಥ್ವಿ ರಂಜನ್ ರಾವ್, ಶಾರದಾ ಭಟ್ ಮುಗುಳಿ. ವಿಶ್ರಾಂತ ಪ್ರಿನ್ಸಿಪಾಲ ಪ್ರೊ.ಕೃಷ್ಣಪ್ಪ ಪೂಜಾರಿ ಇತರ ಗಣ್ಯರು ಹಾಜರಿದ್ದರು.

ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಕಾರ್ಯದರ್ಶಿ ಶೇಕರ ಬಂಗೇರರವರು ಪ್ರಸ್ತಾಪಿಸಿ ಸ್ವಾಗತಿಸಿದರು.ಕೋಶಾಧಿಕಾರಿ ವಸಂತ ಸುವರ್ಣ ಧನ್ಯವಾದವನ್ನು ನೀಡಿದರು. ಸುರೇಶ್ ಶೆಟ್ಟಿ ಅವರು ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ಮುಗುಳಿ ನಾರಾಯಣ ಭಟ್, ನಿವೃತ್ತ ಶಿಕ್ಷಕಿ ಉಮಾ ರಾವ್, ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಟ್ರಸ್ಟಿ ಜಿ.ಸೋಮೇ ಗೌಡ, ಗೌರವ ಸಲಹೆಗಾರ ಎ.ಕೃಷ್ಣಪ್ಪ ಪೂಜಾರಿ, ಪ್ರಧಾನ ಅರ್ಚಕ ರಾಘವೇಂದ್ರ ಭಾಂಗಿಣ್ಣಾಯ ಕುಂಠಿಣಿ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here