Site icon Suddi Belthangady

ಬಳಂಜ: ಗುರುಪೂಜೆ ಹಾಗೂ ಪದ ಪ್ರಧಾನ ಸಮಾರಂಭ

ಬಳಂಜ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ನಾಲ್ಕೂರು, ತೆಂಕಕಾರಂದೂರು, ಯುವ ಬಿಲ್ಲವ ವೇದಿಕೆ, ಬಿಲ್ಲವ ಮಹಿಳಾ ವೇದಿಕೆ ಇದರ ಆಶ್ರಯದಲ್ಲಿ ಶ್ರೀ ನಾರಾಯಣ ಗುರುಗಳ 169ನೇ ಜನ್ಮ ಜಯಂತಿ ಅಂಗವಾಗಿ ಗುರು ಪೂಜೆ ಮತ್ತು ನೂತನ ಆಡಳಿತ ಮಂಡಳಿಯ ಪದ ಪ್ರಧಾನ ಸಮಾರಂಭ ಸಂಘದ ಸಭಾಂಗಣದಲ್ಲಿ ನಡೆಯಿತು.ಸಂಘದ ಪ್ರಧಾನ ಅರ್ಚಕರಾದ ರಘುನಾಥ್ ಶಾಂತಿಯವರ ವೈಧಿಕ ನೇತೃತ್ವದಲ್ಲಿ ಗುರುಪೂಜೆ ನಡೆಯಿತು.ಪಂಚಶ್ರೀ ಮಹಿಳಾ ಭಜನಾ ಮಂಡಳಿ ಸದಸ್ಯರಿಂದ ಭಜನೆ ನೆರವೇರಿತು.

ನಂತರ ನಡೆದ ಸಮಾರಂಭದಲ್ಲಿ ನೂತನ ಆಡಳಿತ ಮಂಡಳಿ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಸಂಘದ ನಿರ್ಗಮನ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಎಚ್.ಎಸ್ ವಹಿಸಿ ನೂತನ ಅಧ್ಯಕ್ಷರಾಗಿ ಆಯ್ಕೆ ಆಗಿರುವ ಸಂತೋಷ್.ಪಿ.ಕೋಟ್ಯಾನ್ ರವರಿಗೆ ಅಧಿಕಾರ ಹಸ್ತಾಂತರ ಮಾಡಿದರು.ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾದ ಪ್ರವೀಣ್ ಕೋಟ್ಯಾನ್ ಶರತ್ ಅಂಚನ್ ರವರಿಗೆ ಹಾಗೂ ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷರಾದ ಪುಷ್ಪಾ ಗಿರೀಶ್ ಭಾರತಿ ಸಂತೋಷ್ ರವರಿಗೆ ಅಧಿಕಾರ ಹಸ್ತಾಂತರ ಮಾಡಿದರು.

ಸಂಘದ ಗೌರವಾಧ್ಯಕ್ಷರಾದ ಎಚ್ ದರ್ಣಪ್ಪ ಪೂಜಾರಿ ಶುಭ ಹಾರೈಸಿದರು.ಸಂಫದ ಮಾಜಿ ಅಧ್ಯಕ್ಷರುಗಳು, ನಿರ್ದೇಶಕರುಗಳು, ತಾಲೂಕು ಸಂಘದ ನಿರ್ದೇಶಕರಾದ ರಂಜಿತ್ ಎಚ್.ಡಿ.ಮುಂತಾದವರು ಉಪಸ್ಥಿತರಿದ್ದರು.ಸದಾನಂದ ಸಾಲಿಯಾನ್ ಬಳಂಜ ಸ್ವಾಗತಿಸಿದರು.ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿದರು.

Exit mobile version