ಕೊಯ್ಯೂರು ಸ.ಪ್ರೌ.ಶಾಲೆಯಲ್ಲಿ ಬೆಳ್ತಂಗಡಿ ವಲಯದ ಪ್ರೌ.ಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಸ್ಪರ್ಧೆ

0

ಕೊಯ್ಯೂರು: ಸರಕಾರಿ ಪ್ರೌಢಶಾಲೆ ಕೊಯ್ಯೂರು ಇಲ್ಲಿ 2023-24ನೇ ಸಾಲಿನ ಬೆಳ್ತಂಗಡಿ ವಲಯದ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಸ್ಪರ್ಧೆ ನಡೆಯಿತು.

ಕಾರ್ಯಕ್ರಮವನ್ನು ಕೊಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ದಯಾಮಣಿ ಉದ್ಘಾಟಿಸಿ ಮಕ್ಕಳಲ್ಲಿ ಇರುವ ಪ್ರತಿಭೆಯನ್ನು ಅನಾವರಣಗೊಳಿಸಲು ಇದು ಉತ್ತಮ ಅವಕಾಶ ಹಾಗಾಗಿ ಎಲ್ಲಾ ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಬೇಕು ಎಂದರು.ಎಸ್.ಡಿ.ಎಂ.ಸಿ ಅಧ್ಯಕ್ಷ ದಾಮೋದರ ಗೌಡ ಬೆರ್ಕೆ ಅಧ್ಯಕ್ಷತೆ ವಹಿಸಿದ್ದರು.

ಕೊಯ್ಯೂರು ಸೇವಾ ಸಹಕಾರಿ ಬ್ಯಾಂಕಿನ ವ್ಯವಸ್ಥಾಪಕ ಅನಂತಕೃಷ್ಣ ಭಟ್, ಅಧ್ಯಕ್ಷ ನವಿಣ್ ಕುಮಾರ್ ವಾದ್ಯಕೋಡಿ ಸರಕಾರಿ ಪ್ರೌಢಶಾಲೆ ಪೆರ್ಲಬೈಪಾಡಿ ಶಾಲ ಮುಖ್ಯೋಪಾಧ್ಯಯ ಬಾಲಕೃಷ್ಣ ಕೊರಮೇರು, ಪ್ರೌಢಶಾಲಾ ಸಹಶಿಕ್ಷಕರ ಸಂಘ ಬೆಳ್ತಂಗಡಿ ಇದರ ಕಾರ್ಯದರ್ಶಿ ಶಿವಪುತ್ರ ಸುಣಗಾರ, ಸರಕಾರಿ ಪದವಿ ಪೂರ್ವ ಕಾಲೇಜು ಕೊಯ್ಯೂರು ಪ್ರಾಚಾರ್ಯ ಬಾಲಕೃಷ್ಣ ಬೇರಿಕೆ ಪಂಚಾಯತ್ ಸದಸ್ಯ ಯಶವಂತ ಗೌಡ, ಲೋಕೇಶ್ ಗೌಡ ಪಾಂಬೇಲು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ರಾಧಾಕೃಷ್ಣ ತಚ್ಚಮೆ ಸ್ವಾಗತಿಸಿ, ಪ್ರವೀಣ್ ಕುಮಾರ್ ವಂದಿಸಿ, ರಾಮಚಂದ್ರ ದೊಡಮನಿ ನಿರೂಪಿಸಿ, ಶಾಲಾ ಸಮಗ್ರ ಪ್ರಥಮ ಪ್ರಶಸ್ತಿಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಹಾಗೂ ದ್ವಿತೀಯ ಸ್ಥಾನವನ್ನು ವಾಣಿ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಹಾಗೂ ಸೈಂಟ್ ಸಾವಿಯೋ ಪ್ರೌಢಶಾಲೆ ಬೆಂದ್ರಾಳ ಪಡೆದುಕೊಂಡರು.

LEAVE A REPLY

Please enter your comment!
Please enter your name here