ತುಳುನಾಡ್ ಒಕ್ಕೂಟ ಸಂಘಟನೆಯ ತಾಲೂಕು ಯುವ ಘಟಕಕ್ಕೆ ಪದಾಧಿಕಾರಿಗಳ ಆಯ್ಕೆ

0

ಬೆಳ್ತಂಗಡಿ: ತುಳುನಾಡ್ ಒಕ್ಕೂಟ ಸಂಘಟನೆಯ ಕಾರ್ಯಕರ್ತರ ಸಭೆಯು ಇತ್ತೀಚೆಗೆ ಬೆಳ್ತಂಗಡಿಯಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ತುಳುನಾಡ್ ಒಕ್ಕೂಟ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷ ರಾಜೇಶ್ ಕುಲಾಲ್ ಬೈರೊಟ್ಟು ವಹಿಸಿದ್ದರು.

ಈ ಸಂದರ್ಭದಲ್ಲಿ ತುಳುನಾಡ್ ಒಕ್ಕೂಟ ಬೆಳ್ತಂಗಡಿ ತಾಲೂಕು ಯುವ ಘಟಕದ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಆಕಾಶ್ ಪೂಜಾರಿ ಗೇರುಕಟ್ಟೆ, ಉಪಾಧ್ಯಕ್ಷರಾಗಿ ಪುರಂದರ ಗೌಡ ಶಿರ್ಲಾಲು, ಕಾರ್ಯದರ್ಶಿಯಾಗಿ ಚಂದ್ರಹಾಸ ಕುಂಬಾರ ಬಂದಾರು, ಜೊತೆ ಕಾರ್ಯದರ್ಶಿಯಾಗಿ ರಮೇಶ್ ಸಾಲಿಯಾನ್, ಕೋಶಾಧಿಕಾರಿಯಾಗಿ ಅಶ್ವತ್ ಕುಲಾಲ್ ಅರ್ವ ಆಯ್ಕೆಯಾದರು ಮತ್ತು ಹತ್ತು ಜನರ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.

ಸಂಘಟನೆಯ ಸಂಸ್ಥಾಪಕರಾದ ಶೈಲೇಶ್ ಆರ್.ಜೆ ಯವರು ನೂತನ ಯುವ ಘಟಕಕ್ಕೆ ಸಂಘಟನೆಯ ಧ್ಯೇಯ, ಉದ್ದೇಶಗಳ ಬಗ್ಗೆ ವಿವರಿಸಿ, ತುಳು ಚಳುವಳಿಯನ್ನು ಮುಂದುವರಿಸುವ ರೀತಿ, ಪ್ರಾದೇಶಿಕ ಚಳುವಳಿ ಯಶಸ್ಸು ಆಗಲು ಯುವ ಘಟಕ ಯುವಜನತೆಯೊಂದಿಗೆ ಕೊಂಡಿಯಾಗಿ ಕಾರ್ಯ ನಿರ್ವಹಿಸಬೇಕಾಗುತ್ತದೆ ಎಂದು ತಿಳಿಸಿದರು.ಮತ್ತು ನೂತನ ಯುವ ಘಟಕದ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ಬೆಳ್ತಂಗಡಿ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿಯಾದ ರಾಜು ಬಿ.ಎಚ್. ಸ್ವಾಗತಿಸಿ, ನಿರ್ವಹಿಸಿ, ವಂದಿಸಿದರು.ತುಳುನಾಡ್ ಒಕ್ಕೂಟ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here