Site icon Suddi Belthangady

ಗಾಂಜಾ ಸೇವಿಸಿ ಅಡ್ಡಾದಿಡ್ಡಿ ಕಾರು ಚಲಾಯಿಸುತ್ತಿದ್ದಾತನನ್ನು ಬಂಧಿಸಿದ ವೇಣೂರು ಪೊಲೀಸರು

ವೇಣೂರು: ಗಾಂಜಾ ಸೇವಿಸಿ ಅಡ್ಡಾದಿಡ್ಡಿ ಕಾರು ಚಲಾಯಿಸುತ್ತಿದ್ದಾತನನ್ನು ಬಂಧಿಸಿರುವ ಘಟನೆ ಬೆಳ್ತಂಗಡಿ ತಾಲೂಕು ನಿಟ್ಟಡೆ ಗ್ರಾಮದ ಕುಂಭಶ್ರೀ ಬಸ್ ನಿಲ್ದಾಣದ ಬಳಿ ನಡೆದಿದೆ. ಬಂಧಿತ ಆರೋಪಿ ಚಿಕ್ಕಮಗಳೂರು ನಿವಾಸಿ ಸಂತೋಷ್ (23ವ) ಎಂದು ಗುರುತಿಸಲಾಗಿದೆ.

ಸಂತೋಷ್ ಗಾಂಜಾ ನಶೆಯಲ್ಲಿ ಅಡ್ಡಾದಿಡ್ಡ ಕಾರು ಚಲಾಯಿಸುತ್ತಿದ್ದ.ವೇಣೂರು ಪೊಲೀಸ್ ಠಾಣಾ ಪೊಲೀಸರು ತಡೆದು ನಿಲ್ಲಿಸಿದಾಗ ಆತನು ಅಮಲಿನ ನಶೆಯಲ್ಲಿದ್ದಂತೆ ಕಂಡು ಬಂದಿದೆ.ಆತನನ್ನು ವಿಚಾರಿಸಿದಾಗ ಗಾಂಜಾ ಸೇವನೆ ಮಾಡಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾನೆ.ಆತನನ್ನು ವಶಕ್ಕೆ ಪಡೆದು ವೈದ್ಯಾಧಿಕಾರಿಗಳಿಂದ ತಪಾಸಣೆಗೆ ಒಳಪಡಿಸಿದಾಗ ನಿಷೇದಿತ ವಸ್ತು ಗಾಂಜಾವನ್ನು ಸೇವನೆ ಸೇವಿಸಿರುವುದು ದೃಢಪಟ್ಟಿರುತ್ತದೆ.ಆರೋಪಿ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version