Site icon Suddi Belthangady

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

ಮುಂಡಾಜೆ ಬಂಟರ ಗ್ರಾಮ ಸಮಿತಿಯ ಸಭೆಯು ಸೆ.3ರಂದು ಶಿವರಾಜ್ ರೈ ಸೋಮಂತಡ್ಕ ಇವರ ಮನೆಯಲ್ಲಿ ಜರಗಿತು.ಬೆಳ್ತಂಗಡಿ ಬಂಟರ ಸಂಘದ ವತಿಯಿಂದ ಹೊರ ತರುತ್ತಿರುವ ಬೆಳ್ತಂಗಡಿ ತಾಲೂಕು ಬಂಟ ಸಮಾಜ ಬಾಂಧವರ ಸಮೀಕ್ಷೆ ಗೆ ಅಗತ್ಯವಿರುವ ಮಾಹಿತಿಯನ್ನು ಈ ಸಭೆಯಲ್ಲಿ ಪಡೆದುಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಗೌರವಾಧ್ಯಕ್ಷ ರಾಮಣ್ಣ ಶೆಟ್ಟಿ ಇವರು ಸಂಘವನ್ನು ಬಲಪಡಿಸುವ ಕುರಿತು ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುರುಷೋತ್ತಮ ಶೆಟ್ಟಿ ಅಗರಿ ಇವರು ವಹಿಸಿಕೊಂಡರು. ವೇದಿಕೆಯಲ್ಲಿ ದಯಾನಂದ ಶೆಟ್ಟಿ ಅಗರಿ, ಮಧು ಶೆಟ್ಟಿ ಹುರ್ತಾಜೆ, ವಿಜಯಕುಮಾರ್ ರೈ, ಶಿವರಾಜ್ ರೈ ಇವರುಗಳು ಉಪಸ್ಥಿತರಿದ್ದರು. ಕಾರ್ಯದರ್ಶಿ ವಿಜಯಕುಮಾರ್ ರೈ ಇವರು ಸ್ವಾಗತಿಸಿ, ಜೊತೆ ಕಾರ್ಯದರ್ಶಿ ನವೀತ್ ಶೆಟ್ಟಿ ನೆಯೈಲ್ ಇವರು ಧನ್ಯವಾದವಿತ್ತರು.

Exit mobile version