ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

0

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು ನಿಟ್ಟಡೆ ವೇಣೂರು ನಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.ವಿದ್ಯಾರ್ಥಿಗಳು ಶಿಕ್ಷಕರಿಗೆ ವಿಭಿನ್ನ ರೀತಿಯ ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನವನ್ನು ವಿತರಿಸಿದರು.

ಈ ಕಾರ್ಯಕ್ರಮದಲ್ಲಿ ನಮ್ಮ ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ ಎಚ್ ಅಧ್ಯಕ್ಷರಾಗಿದ್ದು, ಇದು ನಿಮ್ಮ ಜೀವನಕ್ಕೆ ಅಡಿಪಾಯ ಇನ್ನು ಮುಂದಕ್ಕೂ ನಿಮ್ಮ ಜೀವನ ಉಜ್ವಲವಾಗಲಿ ಎಂದು ಮಕ್ಕಳಿಗೆ ಶುಭ ಹಾರೈಸಿದರು.ಹಾಗೆ ನಮ್ಮ ಶಾಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಿತ್ ಕುಲಾಲ್ ವಿದ್ಯಾರ್ಥಿಗಳೇ ಉತ್ತಮ ಅಂಕಗಳನ್ನು ಪಡೆದು ನಿಮ್ಮ ಜೀವನವನ್ನು ರೂಪಿಸಿಕೊಳ್ಳಿ ಎಂದು ಮಕ್ಕಳಿಗೆ ಹೇಳಿದರು.

ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಓಮನ ಎಮ್ ಎ , ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಉಷಾ ಜಿ, ಹಿರಿಯ ಪ್ರಾಥಮಿಕ ಮುಖ್ಯೋಪಾಧ್ಯಾಯನಿ ಅಕ್ಷತಾ, ಕಿರಿಯ ಪ್ರಾಥಮಿಕ ಪವಿತ್ರ ಮತ್ತು ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧಾಯನಿ ಶೋಭಾ ಎಲ್ ಎನ್ ರಾವ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮವನ್ನು ಹತ್ತನೇ ತರಗತಿಯ ವಿದ್ಯಾರ್ಥಿನಿಯರಾದ ಅಸ್ಮಿತ, ಹರ್ಷಿತ ಫೆರ್ನಾಂಡಿಸ್, ದೃತಿ, ಸುಭಿಕ್ಷಾ ನಿರೂಪಿಸಿ, ಮೆಲ್ವಿನ್ ತೋಮಸ್ ಸ್ವಾಗತಿಸಿ, ಮಿಸ್ಬಾ ವಂದಿಸಿದರು.ತ್ರಿಷ, ಹರ್ಷಿಯ, ಸಮೀಕ್ಷಾ ಮತ್ತು ದೀಪ್ತಿ ಈ ಕಾರ್ಯಕ್ರಮವನ್ನು ಆಯೋಜಿಸಿದರು. ಎಲ್ಲಾ ವಿದ್ಯಾರ್ಥಿಗಳು ಸಹಕರಿಸಿದರು. ಕೊನೆಯದಾಗಿ ಸಿಹಿ ತಿಂಡಿಯನ್ನು ವಿತರಿಸಲಾಯಿತು.

LEAVE A REPLY

Please enter your comment!
Please enter your name here