Site icon Suddi Belthangady

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಬಜರಂಗದಳ ಇದರ ಜಂಟಿ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ

ಮದ್ದಡ್ಕ: ಶ್ರೀರಾಮ ಸೇವಾ ಸಮಿತಿ ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಇದರ ಜಂಟಿ ಆಶ್ರಯದಲ್ಲಿ ಶ್ರೀ ಕ್ರಷ್ಣ ಜನ್ಮಾಷ್ಠಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವಕ್ಕೆ ಚಾಲನೆ ನೀಡಲಾಯಿತು.

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರು ವೇದಮೂರ್ತಿ ಯಂ.ರಘುರಾಮ ಭಟ್ ಮಠ ವೈದಿಕ ವಿದಿ ವಿಧಾನಗಳನ್ನು ನೆರವೇರಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶ್ರೀರಾಮ ಸೇವಾ ಸಮಿತಿಯ ಅಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ ಪಡ್ಡೈಲು, ಗೌರವಾದ್ಯಕ್ಷ ಶೇಖರ್ ಶೆಟ್ಟಿ ಉಪ್ಪಡ್ಕ, ಪ್ರಧಾನ ಕಾರ್ಯದರ್ಶಿ ಮನೋಹರ ಕೇದಳಿಕೆ, ಕೋಶಾದಿಕಾರಿ ಹರೀಶ್ ಬಪ್ಪಳಿಕೆ, ಯಶೋದರ ಶೆಟ್ಟಿ ಅರ್ಕಜೆ, ಸಂಚಾಲಕರು ಬಜರಂಗಧಳ ಮದ್ದಡ್ಕ, ವಿನೋದ್ ಶೆಣೈ ಮದ್ದಡ್ಕ, ಪ್ರಭಾಕರ ಶೆಟ್ಟಿ ಉಪ್ಪಡ್ಕ ಅಧ್ಯಕ್ಷರು ವ್ಯವಸ್ಥಾಪನಾ ಸಮಿತಿ ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ, ಮತ್ತಿತರರು ಉಪಸ್ಥಿತರಿದ್ದರು.

Exit mobile version