Site icon Suddi Belthangady

ಬೆಳ್ತಂಗಡಿ: ಸಂತ ತೆರೇಸಾ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಬೆಳ್ತಂಗಡಿ: ಸೆ.06ರಂದು ಸಂತ ತೆರೇಸಾ ಪದವಿಪೂರ್ವ ಕಾಲೇಜಿನಲ್ಲಿ ಕಾಲೇಜಿನ ನಾಯಕಿ ತೇಜಾಕ್ಷಿ ಹಾಗೂ ಉಪನಾಯಕ ಸಾಯಿ ಕುಮಾರ್ ಇವರ ನೇತೃತ್ವದಲ್ಲಿ ಎಲ್ಲಾ ವಿದ್ಯಾರ್ಥಿಗಳು ಸೇರಿ ಶಿಕ್ಷಕರ ದಿನವನ್ನು ಆಚರಿಸಲಾಯಿತು.ವಿದ್ಯಾರ್ಥಿಗಳು ಎಲ್ಲಾ ಶಿಕ್ಷಕರಿಗೆ ಹೂಗುಚ್ಛವನ್ನು ನೀಡಿ ಪ್ರೀತಿಪೂರ್ವಕವಾಗಿ ಬರಮಾಡಿಕೊಂಡರು.

ಕಾಲೇಜಿನ ಪ್ರಾಂಶುಪಾಲೆ ಭಗಿನಿ ಆರೋಗ್ಯರವರೊಂದಿಗೆ ಎಲ್ಲಾ ಉಪನ್ಯಾಸಕರು ಡಾಕ್ಟರ್ ಸರ್ವಪಳ್ಳಿ ರಾಧಾಕೃಷ್ಣರವರ ಭಾವಚಿತ್ರಕ್ಕೆ ಹೂವನ್ನು ಅರ್ಪಿಸುವ ಮುಖಾಂತರ ಅವರನ್ನು ಸ್ಮರಿಸಲಾಯಿತು.
ವಿದ್ಯಾರ್ಥಿಗಳು ಶಿಕ್ಷಕರಿಗಾಗಿ ವಿವಿಧ ಸಾಂಸ್ಕೃತಿಕ ಕಾರ‍್ಯಕ್ರಮಗಳನ್ನು ಹಮ್ಮಿಕೊಂಡಿದ್ದು ವಿವಿಧ ಆಟೋಟ ಸ್ಪರ್ಧೆಗಳನ್ನು ಮಾಡಿಸಿ ಮನೋರಂಜಿಸಿದರು.ಎಲ್ಲಾ ವಿದ್ಯರ‍್ಥಿಗಳು ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೆನಪಿನ ಕಾಣಿಕೆಯನ್ನು ನೀಡಿದರು.ಪ್ರಾಂಶುಪಾಲರು ಶಿಕ್ಷಕ ಹಾಗೂ ವಿದ್ಯಾರ್ಥಿಗಳ ಸಂಬಂಧದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು.

ವಿದ್ಯಾರ್ಥಿನಿ ಶೆಲ್ವಿ ಮರಿಯ ಎಲ್ಲರನ್ನೂ ಸ್ವಾಗತಿಸಿ ಕಾರ‍್ಯಕ್ರಮವನ್ನು ನಿರೂಪಿಸಿದರು.ವಿದ್ಯಾರ್ಥಿಗಳಾದ ಚೈತ್ರ ಹಾಗೂ ತಂಡದವರು ಪ್ರಾರ್ಥನಾ ವಿಧಿ ನೆರವೇರಿಸಿದರು.ಜಾಸ್ಮೀನ್ ರವರು ವಂದಿಸಿದರು.ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು.

Exit mobile version