Site icon Suddi Belthangady

ಸೆ.11: ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬೆಳ್ತಂಗಡಿಗೆ ಭೇಟಿ

ಬೆಳ್ತಂಗಡಿ: ಸೆ.11ರಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರು ಬೆಳ್ತಂಗಡಿಗೆ ವಿವಿಧ ಸರಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಭೇಟಿ ನೀಡಲಿದ್ದಾರೆ.

ಈ ಸಂಧರ್ಭದಲ್ಲಿ ಮುಖ್ಯವಾಗಿ ಬೆಳ್ತಂಗಡಿಯ ನೂತನ ತಾಲೂಕು ಪಂಚಾಯತ್ ಕಟ್ಟಡದ ಉದ್ಘಾಟನೆ, ಧರ್ಮಸ್ಥಳ- ನಾರಾವಿ ಕೆ ಎಸ್ ಆರ್ ಟಿ ಸಿ ಬಸ್ಸು ಉದ್ಘಾಟನೆ, ಹಕ್ಕುಪತ್ರ ವಿತರಣೆ ಮತ್ತು ವೇಣೂರು ಮಸ್ತಕಾಭಿಷೇಕದ ಪೂರ್ವಭಾವಿ ಸಭೆ ಮುಂತಾದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಮಾಜಿ ಶಾಸಕರಾದ ಕೆ.ವಸಂತ ಬಂಗೇರ, ವಿಧಾನ ಪರಿಷತ್ ಶಾಸಕರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಚಿವರ ಜೊತೆಗೆ ಸಹಭಾಗಿಗಳಾಗಲಿದ್ದಾರೆ.

ಕಾರ್ಯಕ್ರಮದ ಸಂಪೂರ್ಣ ರೂಪುರೇಷೆಗಳ ಬಗ್ಗೆ ಸದ್ಯದಲ್ಲೇ ಮಾಹಿತಿ ನೀಡಲಾಗುವುದು.ಪಕ್ಷದ ಪದಾಧಿಕಾರಿಗಳು, ಹಿತೈಷಿಗಳು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಗಳನ್ನು ಯಶಸ್ಸಿಗೊಳಿಸಬೇಕಾಗಿ ಬೆಳ್ತಂಗಡಿ ನಗರ ಮತ್ತು ಬ್ಲಾಕ್ ಕಾಂಗ್ರೆಸ್ ವತಿಯಿಂದ ತಿಳಿಸಿದ್ದಾರೆ.

Exit mobile version