Site icon Suddi Belthangady

ಮದ್ದಡ್ಕ: ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಬಜರಂಗದಳ ಇದರ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ

ಬೆಳ್ತಂಗಡಿ: ಶ್ರೀ ಕೃಷ್ಣ ಜನ್ಮಾಷ್ಠಮಿ ಸಾಮೂಹಿಕ ಆಚರಣೆ ಮಾಡುವ ಮೂಲಕ ಸಂಬಂಧ ವೃದ್ಧಿಯಾಗುತ್ದದೆ ಶ್ರೀ ಕೃಷ್ಣ ಮನುಕುಲಕ್ಕೆ ನೀಡಿದ ಸಂದೇಶ ಅಪಾರವಾಗಿದ್ದು ಸಮಾಜದ ಉದ್ಧಾರದ ಚಿಂತನೆ ಪ್ರತಿಯೊಬ್ಬರಲ್ಲೂ ಬೆಳೆಯಬೇಕು ಎಂದು ಗುರುವಾಯನಕೆರೆ ಪ್ರೌಢಶಾಲೆ ಸಹ ಶಿಕ್ಷಕ ಯೋಗೀಶ್ ನಾಯಕ್ ನುಡಿದರು.

ಶ್ರೀರಾಮ ಸೇವಾ ಸಮಿತಿ ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗ ದಳ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಜರಗಿದ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು.

ಮಾಜಿ ಶಾಸಕ ಕೆ.ಪ್ರಭಾಕರ ಬಂಗೇರ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯ ಮುಖ್ಯ ಪ್ರಭಂದಕರು ಸುದೀರ್ ನಾಯ್ಕ್ ಆಗಮಿಸಿದ್ದರು. ಶ್ರೀರಾಮ ಸೇವಾ ಸಮಿತಿಯ ಅಧ್ಯಕ್ಷ ರಾಜ್ ಪ್ರಕಾಶ್ ಪಡ್ಡೈಲು, ಗೌರವಾಧ್ಯಕ್ಷ ಶೇಖರ ಶೆಟ್ಟಿ ಉಪ್ಪಡ್ಕ, ಪ್ರಧಾನ ಕಾರ್ಯದರ್ಶಿ ಮನೋಹರ ಕೇದಳಿಕೆ, ಕೋಶಾದಿಕಾರಿ ಹರೀಶ್ ಬಪ್ಪಳಿಕೆ, ಬಜರಂಗದಳ ಮದ್ದಡ್ಕ ಘಟಕದ ಸಂಚಾಲಕ ಯಶೋದರ ಶೆಟ್ಟಿ ಅರ್ಕಜೆ, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಗಣೇಶ್ ಶೆಟ್ಟಿ ಅರ್ಕಜೆ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕೇಂದ್ರ ಸರಕಾರಿ ನೌಕರಿಯಿಂದ ನಿವೃತಿಗೊಂಡ ವಿಠಲ ಶೆಟ್ಟಿ ಉಪ್ಪಡ್ಕ ಇವರನ್ನು ಸಮಿತಿಯಿಂದ ಸನ್ಮಾನಿಸಲಾಯಿತು.

ಶ್ರೀ ರಾಮ ಭಜನಾ ಮಂದಿರದಲ್ಲಿ ಗಣಹೋಮ ವಿಶೇಷ ಪೂಜಾ ವೈದಿಕ ಕಾರ್ಯಕ್ರಮವನ್ನು ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಯಂ, ರಘರಾಮ ಭಟ್ ಮಠ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಮಕ್ಕಳಿಗೆ ಮುದ್ದು ಕೃಷ್ಣ ಸ್ಪರ್ಧೆ, ಸಾರ್ವಜನಿಕರಿಗೆ ಅಟೋಟ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು.ಪ್ರಭಾಕರ ಶೆಟ್ಟಿ ಉಪ್ಪಡ್ಕ ಸ್ವಾಗತಿಸಿ, ಉಮೇಶ್ ಮದ್ದಡ್ಕ ಕಾರ್ಯಕ್ರಮ ನಿರೂಪಿಸಿ, ಹರೀಶ್ ಕೋಟ್ಯಾನ್ ಧನ್ಯವಾದವಿತ್ತರು.ಮಹಾಲಿಂಗೇಶ್ವರ ಭಜನಾ ಮಂಡಳಿ ಓಡೀಲು ಇವರಿಂದ ಭಜನಾ ಕಾರ್ಯಕ್ರಮ ಜರಗಿತು.ಶ್ರೀರಾಮ ಸೇವಾ ಸಮಿತಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ಪಧಾದಿಕಾರಿಗಳು ಸರ್ವ ಸದಸ್ಯರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Exit mobile version