Site icon Suddi Belthangady

ಬಂದಾರು: ಮುಂಡೂರು ಶ್ರೀ ಕ್ಷೇತ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಮೊಸರು ಕುಡಿಕೆ ಉತ್ಸವ

ಮೈರೊಳ್ತಡ್ಕ: ಸೆ 06 ಬಂದಾರು ಗ್ರಾಮದ ಮುಂಡೂರು ಶ್ರೀ ಕ್ಷೇತ್ರ ಚಾಮುಂಡೇಶ್ವರಿ ದೇವಸ್ಥಾನದ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ನೂತನವಾಗಿ ರಚನೆಗೊಂಡಿರುವ ಚಾಮುಂಡೇಶ್ವರಿ ಯುವಕ ಮಂಡಲ ಸಂಘಕ್ಕೆ ಚಾಲನೆ, ಹಾಗೂ ಬಡ ಕುಟುಂಬ ಉಷಾವಿಶ್ವನಾಥ ಬಜಿಲ ಮನೆಯವರಿಗೆ ಆಹಾರ ಕಿಟ್ ವಿತರಿಸಲಾಯಿತು.

ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರದ ಧರ್ಮದರ್ಶಿಗಳಾದ ಆನಂದ ಗೌಡ ನೆರವೇರಿಸಿದರು.ಮುಖ್ಯ ಅಥಿತಿಗಳಾಗಿ ಬಂದಾರು ಗ್ರಾಮ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಇವರು ಕಾರ್ಯಕ್ರಮಕ್ಕೆ ಶುಭಕೋರಿದರು.

ಸಂದರ್ಭದಲ್ಲಿ ವೇದಿಕೆಯಲ್ಲಿ ಗಿರೀಶ್ ಗೌಡ ಬಿ.ಕೆ ಕುಂಬುಡoಗೆ, ಚಾಮುಂಡೇಶ್ವರಿ ಯುವಕ ಮಂಡಲದ ಅಧ್ಯಕ್ಷರಾದ ಅಶ್ವಥ್ ಗೌಡ, ಅಕ್ಷಯ ಗೌಡ, ಧರ್ಣಮ್ಮ ಸುಬ್ಬಣ್ಣ ಗೌಡ, ನಾರಾಯಣ ಗೌಡ ಮುಂಡೂರು, ಯುವಕ ಮಂಡಲದ ಪದಾಧಿಕಾರಿಗಳು, ಸದಸ್ಯರು, ಭಕ್ತಾಭಿಮಾನಿಗಳು, ಮನೆಯವರು ಉಪಸ್ಥಿತರಿದ್ದರು.

ವಿವಿಧ ಆಟೋಟ ಸ್ಪರ್ಧೆಗಳು, ಕಡುಬಡತನದ ಮನೆಗೆ ಆಹಾರ ವಿತರಣೆ ಕಾರ್ಯಕ್ರಮ, ಸಮಸ್ತರಿಗೂ ಅನ್ನದಾನ ಸೇವೆ, ರಾತ್ರಿ 7 ಗಂಟೆಗೆ ಶ್ರೀಕೃಷ್ಣ ದೇವರಿಗೆ ವಿಶೇಷ ಪೂಜೆ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನೆರವೇರಿಸಲಾಯಿತು.

Exit mobile version