ಚಾರ್ಮಾಡಿ ಘಾಟಿಯಲ್ಲಿ ಅಪಘಾತ- ಪ್ರಾಣಾಪಾಯದಿಂದ ಪಾರು

0

ಚಾರ್ಮಾಡಿ: ಚಾರ್ಮಾಡಿ ಘಾಟಿಯಲ್ಲಿ ಮಳೆ ಸುರಿಯುತ್ತಿದ್ದು ದಟ್ಟನೆಯ ಮಂಜು ಕವಿದ ಈ ಹಿನ್ನಲೆಯಲ್ಲಿ ಸೆ.08ರಂದು ಸಂಜೆ ಎರಡು ಪ್ರತ್ಯೇಕ ಅಪಘಾತಗಳು ಸಂಭವಿಸಿವೆ.

ಚಾರ್ಮಾಡಿ ಬಿದಿರುತಳ ಬಸ್ ನಿಲ್ದಾಣದ ಅಂತರದಲ್ಲಿ ಮಂಗಳೂರಿಗೆ ಸಾಗುತ್ತಿದ್ದ ಬೊಲೆರೊ ವಾಹನವೊಂದು ಮಂಜು ಕವಿದ ಕಾರಣ ದಾರಿ ಕಾಣದೇ ತಡೆಗೋಡೆಗೆ ಹತ್ತಿ ಪಲ್ಟಿಯಾಗಿದ್ದು, ಅದೃಷ್ಟ ವಶಾತ್ ಬೊಲೇರೊ ವಾಹನದಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನೊಂದು ಪ್ರಕರಣ ಅಣ್ಣಪ್ಪ ಸ್ವಾಮಿ ದೇವಸ್ಥಾನದಿಂದ ಸ್ವಲ್ಪ ಮುಂದೆ ಕಿರು ದಾರಿಯಲ್ಲಿ ಮಂಜು ಮುಸುಕಿದ್ದರಿಂದ ದಾರಿ ಕಾಣದೇ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಬಸ್, ಧರ್ಮಸ್ಥಳದಿಂದ ದಾರವಾಡಕ್ಕೆ ಸಾಗುತ್ತಿದ್ದ ಕಾರು ಕಿರು ದಾರಿಯಲ್ಲಿ ಅಪಘಾತ ಸಂಭವಿಸಿ ತಡೆಗೋಡೆ ಕುಸಿದಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ.

ಈ ಕಿರು ಸ್ಥಳದಲ್ಲಿ ಸಾವಿರ ಅಡಿಯಷ್ಟು ಪ್ರಪಾತ ಇರುವುದರಿಂದ ತಡೆಗೋಡೆ ಕುಸಿದಿದ್ದು, ದಟ್ಟ ಮಂಜು ಕವಿದ ಹಿನ್ನಲೆಯಲ್ಲಿ ಇನ್ನಷ್ಟು ಅಪಾಯವಾಗುವ ಸಾಧ್ಯತೆಯಿದ್ದು, ಹೆದ್ದಾರಿ ಪ್ರಾಧಿಕಾರ ಕೂಡಲೇ ತಡೆಗೋಡೆ ದುರಸ್ತಿ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here