Site icon Suddi Belthangady

ಬೆಳಾಲು: ಮೈತ್ರಿ ಯುವಕ ಮಂಡಲ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

ಬೆಳಾಲು: ಮೈತ್ರಿ ಯುವಕ ಮಂಡಲ (ರಿ.) ಬೆಳಾಲು ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 19 ನೇ ವರ್ಷದ ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮವನ್ನು ಡಾ| ಚೇತನ್ ಕೃಷ್ಣ ಕ್ಲಿನಿಕ್ ಬೆಳಾಲು ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿ ಕಾರ್ಯಕ್ರಮಕ್ಕೆ ಶುಭಕೋರಿದರು.

ಮುಖ್ಯ ಅಥಿತಿಗಳಾಗಿ ಮೋಹನ ವಚ್ಚ ಸಿವಿಲ್ ಇಂಜಿನಿಯರ್, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಶ್ರೀ ಸೌಧ ಬೆಳಾಲು, ಯುವಕ ಮಂಡಲ ಗೌರವಾಧ್ಯಕ್ಷರಾದ ಪ್ರವೀಣ್ ವಿಜಯ್, ಅಧ್ಯಕ್ಷರಾದ ರಾಜೇಶ್ ಗೌಡ ಪಾರಳ, ಕಾರ್ಯದರ್ಶಿ ಮಹಮ್ಮದ್ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನೋಟರಿ ವಕೀಲರಾದ ಶ್ರೀನಿವಾಸ್ ಗೌಡ, ಅಧ್ಯಾಪಕರಾದ ಭರತ್ ಇವರು ಕಾರ್ಯಕ್ರಮ ನಿರ್ವಹಿಸಿದರು.ಸಂಘದ ಗೌರವ ಸಲಹೆಗಾರರು, ಪದಾಧಿಕಾರಿಗಳು, ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.

Exit mobile version