Site icon Suddi Belthangady

ಮಾಚಾರಿನಲ್ಲಿ 32 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

ಮಾಚಾರು: ಇಲ್ಲಿನ ಪ್ರಗತಿ ಯುವಕ ಮಂಡಲ ಪ್ರಗತಿ ಯುವತಿ ಮಂಡಲ ಮಾಚಾರು, ಶ್ರೀ ಲಕ್ಷ್ಮೀನಾರಾಯಣ ಭಜನಾ ಮಂಡಳಿ ಬದನಾಜೆ, ಸ.ಉ.ಹಿ.ಪ್ರಾ ಶಾಲೆ ಬದನಾಜೆ ಹಾಗೂ ಹಳೆ ವಿದ್ಯಾರ್ಥಿ ಸಂಘ ಬದನಾಜೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಸ್ಥಳೀಯರಾದ ಸೇಸಪ್ಪ ಗೌಡ ಎಕ್ಕಿನ ಬೆಟ್ಟು ಉದ್ಘಾಟಿಸಿದರು.

ವೇದಿಕೆಯಲ್ಲಿ ಯುವಕ ಮಂಡಲದ ಗೌರವಾಧ್ಯಕ್ಷರಾದ ರಾಮಯ್ಯ ಗೌಡ, ಭಜನಾ ಮಂಡಳಿ ಅಧ್ಯಕ್ಷ ಸನತ್ ಕುಮಾರ್ ಪಾಲೆಂಜ, ಯುವಕ ಮಂಡಲ ಅಧ್ಯಕ್ಷ ಸೋಮಶೇಖರ್ ಕೆ, ಯುವತಿ ಮಂಡಳಿ ಅಧ್ಯಕ್ಷೆ ಅರುಣಾಕ್ಷಿ, ಅರ್ಚಕರಾದ ಶಶಿಧರ ರಾವ್ ಉಪಸ್ಥಿತರಿದ್ದರು.

ಯುವಕ ಮಂಡಲದ ಕಾರ್ಯದರ್ಶಿ ಸುರೇಶ್ ಮಾಚಾರ್ ಸ್ವಾಗತಿಸಿದರು.ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೋಹನ್.ಪಿ ಕಾರ್ಯಕ್ರಮ ನಿರ್ವಹಿಸಿದರು.

Exit mobile version