Site icon Suddi Belthangady

ಕುಣಿತ ಭಜನಾ ತರಬೇತುದಾರ ವಿ.ಹರೀಶ್ ನೆರಿಯ ರವರಿಗೆ ಗೌರವದ ಸನ್ಮಾನ

ಪುಂಜಾಲಕಟ್ಟೆ: ಶ್ರೀ ರಾಮಾಂಜನೇಯ ಭಜನ ಮಂದಿರ ಪುಂಜಾಲಕಟ್ಟೆ ಇಲ್ಲಿ ನಡೆದ 18 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಠಮಿ ಉತ್ಸವದ ಸಮಾರೋಪ ಸಮಾರಂಭದಲ್ಲಿ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಸಾವಿರಾರು ಭಜಕರಿಗೆ ಕುಣಿತ ಭಜನಾ ತರಬೇತಿಯನ್ನು ಸೇವಾ ರೂಪದಲ್ಲಿ ನೀಡುತ್ತಿರುವ ಭಜನಾ ಸಾಧಕ ವಿ.ಹರೀಶ್ ನೆರಿಯ ಹಾಗೂ ಸಂದೇಶ್ ಮದ್ದಡ್ಕ ರವರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ತುಂಗಪ್ಪ ಬಂಗೇರ ಅಧ್ಯಕ್ಷತೆಯಲ್ಲಿ ಜರುಗಿದ ಸಮಾರೋಪ ಸಮಾರಂಭದಲ್ಲಿ ಪಿಲಾತಾಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಯೋಗೇಂದ್ರ ಕುಮಂಗಿಲ, ನಾರಾಯಣ ಗುರು ವಶತಿ ಶಾಲೆಯ ಪ್ರಾಂಶುಪಾಲರಾದ ಸಂತೋಷ್, ಶ್ರೀ ರಾಮಾಂಜನೇಯ ಭಜನಾ ಮಂಡಳಿಯ ಅಧ್ಯಕ್ಷ ಯಶೋಧರ ನಾಕುನಾಡು ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು.

Exit mobile version