ಧರ್ಮಸ್ಥಳ-ನಾರಾವಿ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರಕ್ಕೆ ಸಚಿವ ದಿನೇಶ್ ಗುಂಡೂರಾವ್ ರಿಂದ ಚಾಲನೆ

0

ಅಳದಂಗಡಿ: ಧರ್ಮಸ್ಥಳದಿಂದ ನಾರಾವಿ ನಡುವೆ ಓಡಾಡುವ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರಕ್ಕೆ ಚಾಲನೆ ಸೆ.11 ರಂದು ಅಳದಂಗಡಿ ನಮನ ಸಭಾ ಭವನದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.ಸಮಾರಂಭದ ಅಧ್ಯಕ್ಷತೆಯನ್ನು ಮಾಜಿ ಶಾಸಕ ಕೆ. ವಸಂತ ಬಂಗೇರ ವಹಿಸಿದ್ದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಮಂಜುನಾಥ್ ಭಂಡಾರಿ, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಬೆಳ್ತಂಗಡಿ ಕಾಂಗ್ರೆಸ್ ಉಭಯಬ್ಲಾಕ್ ಅಧ್ಯಕ್ಷರಾಗಳಾದ ಸತೀಶ ಕೆ.ಕಾಶೀಪಟ್ಣ, ನಾಗೇಶ್ ಕುಮಾರ್ ಗೌಡ, ಜಿ.ಪ.ಮಾಜಿ ಸದಸ್ಯರುಗಳಾದ ಧರಣೇಂದ್ರ ಕುಮಾರ್, ಶೇಖರ್ ಕುಕ್ಕೆಡಿ, ನಮಿತಾ, ಶಾಹುಲ್ ಹಮೀದ್, ಮಹಿಳಾ ಬ್ಲಾಕ್ ಅಧ್ಯಕ್ಷೆ ವಂದನಾ ಭಂಡಾರಿ, ತಾ.ಪಂಚಾಯತ್ ಮಾಜಿ ಸದಸ್ಯ ಪ್ರಶಾಂತ್ ವೇಗಸ್, ಪಂಚಾಯತ್ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಕೊಡಂಗೆ, ದೇವಿಪ್ರಸಾದ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ವಿವಿಧ ಗ್ರಾಮ ಪಂಚಾಯತ್ ಸದಸ್ಯರು, ನಾಗರೀಕರು ಹಾಜರಿದ್ದರು

LEAVE A REPLY

Please enter your comment!
Please enter your name here