ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ ಗಣೇಶ ಚತುರ್ಥಿಯ ಪ್ರಯುಕ್ತ 108 ಕಾಯಿ ಗಣಹೋಮ ಹಾಗೂ ರಂಗಪೂಜೆ

0

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಸೆ.19ರಂದು ಶ್ರೀ ಗಣೇಶ ಚತುರ್ಥಿಯ ಪ್ರಯುಕ್ತ ಶ್ರೀ ದೇವಳದಲ್ಲಿ ಬೆಳಿಗ್ಗೆ ಗಂಟೆ 8.00ರಿಂದ 108 ಕಾಯಿ ಗಣಹೋಮ ಹಾಗೂ ರಂಗಪೂಜೆ ನಂತರ ಮಹಾಪೂಜೆ ಮತ್ತು ಅನ್ನ ಸಂತರ್ಪಣೆ ಸೆ.19ರಂದು ಜರಗಲಿರುವುದು.

ಗಣಹೋಮ ಸೇವೆ ಮಾಡಲಿಚ್ಛಿಸುವ ಭಕ್ತಾಧಿಗಳು ಬೆಳಿಗ್ಗೆ 11.00 ಗಂಟೆಗೆ ಮುಂಚಿತವಾಗಿ ಸೇವಾ ಕೌಂಟರ್‌ನಲ್ಲಿ ರಶೀದಿ ಪಡೆದು ಸಂಕಲ್ಪ ಮಾಡಿಸಬೇಕೆಂದು ಹಾಗೂ ಈ ಪುಣ್ಯ ಕಾರ್ಯದಲ್ಲಿ ಭಕ್ತಾದಿಗಳು ಭಾಗವಹಿಸಿ ಪ್ರಸಾದ ಸ್ವೀಕರಿಸಿ, ಶ್ರೀ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಕಾರ್ಯನಿರ್ವಹಣಾಧಿಕಾರಿ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಅರ್ಚಕರು, ಸಿಬ್ಬಂದಿ ವರ್ಗದಿಂದ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here