ನಿಂತಿಕಲ್ಲು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

0

ಬೆಳಾಲು: ಇಲ್ಲಿಯ ನಿಂತಿಕಲ್ಲು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ ಸೆ. 11 ರಂದು ನಡೆಯಿತು. ಜೊತೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಮಕ್ಕಳಿಗೆ ಕೃಷ್ಣ ವೇಷ ಹಾಕಿ ನೃತ್ಯ ಮಾಡಿಸಲಾಯಿತು. ಬಾಲವಿಕಾಸ ಸಮಿತಿ ಅಧ್ಯಕ್ಷೆ ಹೇಮಾವತಿ, ಶಿಶು ಅಭಿವೃದ್ಧಿ ಯೋಜನೆ ಧರ್ಮಸ್ಥಳ ವಲಯದ ಮೇಲ್ವಿಚಾರಕಿ ಅನ್ನಪೂರ್ಣ , ಆರೋಗ್ಯ ಇಲಾಖೆಯ ಕುಮಾರಿ ತೇಜಾವತಿ, ಸಂಜೀವಿನಿ ಒಕ್ಕೂಟದ ವಸಂತಿ, ಆಶಾ ಕಾರ್ಯಕರ್ತೆ ಶೀಲಾವತಿ, ಪ್ರೇಮ, ಸ್ಥಳೀಯರಾದ ಶೇಖರ ಗೌಡ ಕೊಲ್ಲಿಮಾರು, ಉಷಾದೇವಿ ಕಿನ್ಯಾಜೆ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅಂಗನವಾಡಿ ಕಾರ್ಯಕರ್ತೆ ಭಾರತಿ, ಸಹಾಯಕಿ ವಿಮಲಾ ಸಹಕರಿಸಿದರು.

ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು,ತಾಯಂದಿರು, ಸ್ತ್ರೀ ಶಕ್ತಿ ಸಂಘದ ಸದಸ್ಯರು, ಊರವರು ಹಾಗೂ ಹಳೆವಿದ್ಯಾರ್ಥಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here