Site icon Suddi Belthangady

ಎಸ್.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜು-ಯೋಗಾಸನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ :ಶ್ರೀ ರಾಮ ಪದವಿ ಪೂರ್ವ ಕಾಲೇಜು ಕಲ್ಲಡ್ಕ ಇಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ‘ಜಿಲ್ಲಾ ಮಟ್ಟ’ದ ಯೋಗಾಸನ ಸ್ಪರ್ಧೆಯಲ್ಲಿ ಉಜಿರೆ ಶ್ರೀ ಧ. ಮ.ವಸತಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳಾದ ನಂದೀಶ್ ಎಸ್. ಎಸ್., ಭರತ್ ಕುಮಾರ್, ಅರ್ಜುನ್ ಎಸ್. ಎನ್., ಕೌಸ್ತುಭ, ಚೇತನ್ ಕಾಲೇಜನ್ನು ಪ್ರತಿನಿಧಿಸಿ ರನ್ನರ್ ಟ್ರೋಫಿ ತಮ್ಮದಾಗಿಸಿಕೊಂಡರೆ, ವಿದ್ಯಾರ್ಥಿ ಅರ್ಜುನ್ ಎಸ್. ಎನ್. ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡನು.

ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ದೈಹಿಕ ಶಿಕ್ಷಕರಾದ ಲಕ್ಷ್ಮಣ್ ಜಿ. ಡಿ. ಹಾಗೂ ಸಂಸ್ಥೆಯ ಈಜು ತರಬೇತುದಾರ ಸೀನಪ್ಪರವರು ಶ್ರಮಿಸಿದ್ದರು.

ಸಹಾಯಕ ವಾರ್ಡನ್ ಮನೋಜ್ ಸಹಕರಿಸಿದರು.ಕಾಲೇಜಿನ ಪ್ರಾಂಶುಪಾಲ ಸುನಿಲ್ ಪಂಡಿತ್ ಹಾಗೂ ಸಿಬ್ಬಂದಿವರ್ಗ ವಿದ್ಯಾರ್ಥಿಗಳ ಸಾಧನೆಯನ್ನು ಪ್ರಶಂಸಿದರು.

Exit mobile version