Site icon Suddi Belthangady

ಸುಣ್ಣದಕೆರೆ ಅಂಗನವಾಡಿ ಕೇಂದ್ರದ ನಿವೃತ್ತ ಕಾರ್ಯಕರ್ತೆ ವಸಂತಿಯವರಿಗೆ ಸನ್ಮಾನ

ಗುರುವಾಯನಕೆರೆ: ಸುಣ್ಣದಕೆರೆ ಅಂಗನವಾಡಿ ಕೇಂದ್ರ ಬಾಲ ವಿಕಾಸ ಸಮಿತಿ ಹಾಗೂ ಸ್ವಾಗತ ಸಮಿತಿ ಸುಣ್ಣದಕೆರೆ ಮತ್ತು ಗ್ರಾಮಸ್ಥರ ಜಂಟಿ ಆಶ್ರಯದಲ್ಲಿ ಅಂಗನವಾಡಿ ಕೇಂದ್ರದ ಸುಣ್ಣದ ಕೆರೆಯಲ್ಲಿ ಸುಮಾರು ಮೂವತ್ತು ವರ್ಷಗಳ ಕಾಲ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ, ಇದೀಗ ನಿವೃತ್ತಿ ಜೀವನಕ್ಕೆ ಪಾದಾರ್ಪಣೆಗೈದ ಶ್ರೀಮತಿ ವಸಂತಿ ರವರಿಗೆ ಸನ್ಮಾನ ಕಾರ್ಯಕ್ರಮ ಇತೀಚೆಗೆ ಜರುಗಿತು.

ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತೀ ಎಸ್ ಶೆಟ್ಟಿ, ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಕುವೆಟ್ಟು ಗ್ರಾಮ ಪಂಚಾಯತ್ ನ ಸದಸ್ಯರಾದ ಶಮಿಮುಲ್ಲ ಕೆ, ಮುಖ್ಯ ಅತಿಥಿಯಾಗಿ ಕುವೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಗಣೇಶ್ ಕುಲಾಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಸುಮನಾ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆ ಎಸ್.ಡಿ.ಎಂ.ಸಿ ಅಧ್ಯಕ್ಷ ಅಬ್ದುಲ್ ಲತೀಫ್, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಿಲಿಚಂಡಿಕಲ್ಲು ಎಸ್.ಡಿ.ಎಂ.ಸಿ ಅಧ್ಯಕ್ಷ ಮುಸ್ತಫಾ ಹಾಗೂ ಉಪಾಧ್ಯಕ್ಷೆ ಲಲಿತಾ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಿಲಿಚಂಡಿಕಲ್ಲು ಇದರ ಮುಖ್ಯ ಶಿಕ್ಷಕ ನಾಗಪ್ಪ, ಗ್ರಾಮ ಪಂಚಾಯತ್ ಸದಸ್ಯರಾದ ಮಹಮ್ಮದ್ ಮುಸ್ತಫಾ, ಮೈಮುನ್ನಿಸ, ಮೋಹಿನಿ, ಕುವೆಟ್ಟು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕೆ ಸಲೀಮ್, ಬಾಲವಿಕಾಸ ಸಮಿತಿ ಸುನ್ನದಕೆರೆ ಅಂಗನವಾಡಿ ಅಧ್ಯಕ್ಷೆ ಶೈದ ಭಾನು, ಪಡಂಗಡಿ ಅರೋಗ್ಯ ಕೇಂದ್ರದ ಅರೋಗ್ಯ ಸಹಾಯಕಿ ಪ್ರೀತಿ ಶೆಟ್ಟಿ, ಸ್ಥಳೀಯ ಮಸೀದಿಯ ಮಾಜಿ ಅಧ್ಯಕ್ಷ ಅಬ್ದುಲ್ ರಹ್ಮಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಿವೃತ್ತ ವಸಂತಿ ಕಾರ್ಯಕರ್ತೆ ಹಾಗೂ ಮೋಹನ್ ಆಚಾರ್ಯ ಕೆ.ದಂಪತಿ ಯವರನ್ನು ಸನ್ಮಾನಿಸಲಾಯಿತು ಹಾಗೂ ಸಹಾಯಕಿಯಾಗಿ ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಬಿ.ಫಾತುಮ್ಮಾ ಹಾಗೂ ನೂರಿನ್ನಿಸರವರನ್ನು 1988 ರಲ್ಲಿ ಅಂಗನವಾಡಿ ಸ್ಥಾಪನೆಗೊಳ್ಳಲು ಶ್ರಮಿಸಿದ ಸ್ಥಾಪಕ ಅಧ್ಯಕ್ಷರಾದ ಪಿ.ಕೆ.ಆಲಿಯಬ್ಬಾ ರವರನ್ನು ಸನ್ಮಾನಿಸಲಾಯಿತು. ಪ್ರಸ್ತುತ ಪ್ರಭಾರಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆ, ಸಹಾಯಕಿ ಸುನಿತಾ, ಸ್ಥಳೀಯ ಆಶಾ ಕಾರ್ಯಕರ್ತೆ ಜಲಜಾಕ್ಷಿ ರವರಿಗೆ ವಿಶೇಷ ಉಡುಗೊರೆ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮ ನಿರೂಪಣೆ ಕೆ.ಸಲೀಂ ಹಾಗೂ ಅಂಗನವಾಡಿ ಕಾರ್ಯಕರ್ತೆ ಆಶಾಲತಾ ನಿರೂಪಿಸಿದರು.ಆಶಾ ಕಾರ್ಯಕರ್ತೆ ಜಲಜಾಕ್ಷಿ ಧನ್ಯವಾದವಿತ್ತರು.

Exit mobile version