Site icon Suddi Belthangady

ಗುರುವಾಯನಕೆರೆ: ಅಡಿಕೆ ಖರೀದಿ ಕೇಂದ್ರದ ಉದ್ಘಾಟನಾ ಸಮಾರಂಭ

ಗುರುವಾಯನಕೆರೆ: ಮಂಗಳೂರು ಕೃಷಿಕರ ಸಹಕಾರಿ ಸಂಘ ನಿಯಮಿತ, ಮಂಗಳೂರು (ಮಾಸ್ ಲಿಮಿಟೆಡ್) ಇವರಿಂದ ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಇದರ ಸಹಯೋಗದಲ್ಲಿ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಇವರ ಸಹಕಾರದೊಂದಿಗೆ ಅಡಿಕೆ ಖರೀದಿ ಕೇಂದ್ರದ ಉದ್ಘಾಟನಾ ಸಮಾರಂಭವು ಸೆ.15ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ಮಾಸ್ ಲಿಮಿಟೆಡ್ ನ ಸ್ಥಾಪಕ ಅಧ್ಯಕ್ಷ ಟಿ.ಜಿ.ರಾಜರಾಮ್ ಭಟ್‌ ನೆರವೇರಿಸಿದರು.ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಅಧ್ಯಕ್ಷ ಶ್ರೀಧರ ಜಿ.ಭಿಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಗೇರುಕಟ್ಟೆಯ ಅಧ್ಯಕ್ಷ ವಸಂತ ಮಜಲು, ಪ್ರಗತಿಪರ ಕೃಷಿಕ ವಸಂತ ಸಾಲಿಯಾನ್ ಕಾಪಿನಡ್ಕ, ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ, ಮಾಜಿ ಶಾಸಕ ಪ್ರಭಾಕರ ಬಂಗೇರ, ಮಾಸ್ ಲಿಮಿಟೆಡ್ ನ ನಿರ್ದೇಶಕ ಇ.ಸುಂದರ ಗೌಡ, ಸತೀಶ್.ಕೆ, ಪುಷ್ಪರಾಜ ಅಡ್ಯಂತಾಯ, ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಇದರ ನಿರ್ದೇಶಕ ಗ್ರೇಶಿಯನ್ ವೇಗಸ್ ಉಪಸ್ಥಿತರಿದ್ದರು.

ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿ ಸ್ವಾಗತಿಸಿ, ಉಪಾಧ್ಯಕ್ಷ ಅನಂತ ಭಟ್ ಎಂ ಧನ್ಯವಾದವಿತ್ತರು.ಮಾಸ್ ಲಿಮಿಟೆಡ್ ನ ಉಪಾಧ್ಯಕ್ಷ ಕೆ.ಸೀತಾರಾಮ ರೈ ಕಾರ್ಯಕ್ರಮ ನಿರೂಪಿಸಿದರು.

Exit mobile version