Site icon Suddi Belthangady

ಡಿ.29-31: ಸುಲ್ಕೇರಿ ಬಸದಿ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಠಾ ಮಹೋತ್ಸವ

ಸುಲ್ಕೇರಿ: ಭಗವಾನ್ ಶ್ರೀ ನೇಮಿನಾಥ ಸ್ವಾಮಿಯ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಟಾ ಮಹೋತ್ಸವದ ದಿನಾಂಕ ಪ್ರಕಟ ಪಡಿಸುವ ಸಭೆ ಸೆ.15 ರಂದು ಸುಲ್ಕೇರಿ ಬಸದಿಯಲ್ಲಿ ನಡೆಯಿತು.ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಡಿಸೆಂಬರ್ 29,30,31ರಂದು ಧಾಮ ಸಂಪ್ರೋಕ್ಷಣಾ ಪೂರ್ವಕ ಭಗವಾನ್ ಶ್ರೀ ನೇಮಿನಾಥ ಸ್ವಾಮಿಯ ಪ್ರತಿಷ್ಠಾ ಮಹೋತ್ಸವ ನಡೆಸುವ ಬಗ್ಗೆ ದಿನಾಂಕ ಪ್ರಕಟ ಪಡಿಸಲಾಯಿತು.

ಸಭೆಯಲ್ಲಿ ಜಿ.ಎಸ್ ರಾಜೇಂದ್ರ ಕುಮಾರ್ ತುಮಕೂರು, ಕಿರಣ್ ಪಾಟೀಲ್ ನಾಸಿಕ್, ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು, ನವರತ್ನ ತುಮಕೂರು, ಬಸದಿಯ ಪುರೋಹಿತರಾದ ಹರ್ಷ ಇಂದ್ರರು ಉಪಸ್ಥಿತರಿದ್ದರು.

ಬಸದಿಯ ಆಡಳಿತ ಮೊಕ್ತೇಸರರಾದ ರವಿರಾಜ ಹೆಗ್ಡೆ ನಾವರಗುತ್ತು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭಬಸದಿಗೆ ಸಂಬಂಧಿಸಿದ ಹಾಗೂ ಸಮಸ್ತ ಶ್ರಾವಕ ಶ್ರಾವಕಿಯರು ಭಾಗವಹಿಸಿದ್ದರು.ವಕೀಲರಾದ ಅಜಿತ್ ಎನ್ ನಾವರ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿ, ವಿಜಯ ಕುಮಾರ್ ಜೈನ್ ವಂದಿಸಿದರು.

Exit mobile version