ಬೆಳ್ತಂಗಡಿ: ಗುರುದೇವ ಕಾಲೇಜಿನ 2023-24ನೇ ಸಾಲಿನ ವಿದ್ಯಾರ್ಥಿ ಸಂಘ ಹಾಗೂ ದಶಮಾನೋತ್ಸವ ಆಚರಣೆಯ ಉದ್ಘಾಟನೆ ಕಾರ್ಯಕ್ರಮ ಮತ್ತು ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ

0

ಬೆಳ್ತಂಗಡಿ: ಗುರುದೇವ ಕಾಲೇಜಿನ 2023- 24ನೇ ಸಾಲಿನ ವಿದ್ಯಾರ್ಥಿ ಸಂಘ ಹಾಗೂ ದಶಮಾನೋತ್ಸವ ಆಚರಣೆಯ ಉದ್ಘಾಟನೆ ಕಾರ್ಯಕ್ರಮ ಮತ್ತು ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವು ಸೆ.16ರಂದು ಶ್ರೀ ಗುರುದೇವ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ ವಸಂತ ಬಂಗೇರ ಮಾಜಿ ಶಾಸಕರು ಬೆಳ್ತಂಗಡಿ ವಹಿಸಿದ್ದರು.ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಅಮಿತಾನಂದ ಹೆಗಡೆ ಇವರು ನೆರವೇರಿಸಿದರು.

ವೇದಿಕೆಯಲ್ಲಿ ಪ್ರಾಂಶುಪಾಲರಾದ ಸವಿತಾ ಇವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.ವಿದ್ಯಾರ್ಥಿ ನಾಯಕ ಚೇತನ್, ಹಸ್ತವಿ, ಅಝ್ವೀನ, ಭುವನ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.ಪಿತಾಂಬರ ಹೆರಾಜೆ ಇವರು ವಿದ್ಯಾರ್ಥಿ ಸಂಘದ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ನಿಧಿ ಭೋದನೆ ಮಾಡಿದರು.ವೇದಿಕೆಯಲ್ಲಿ ಶ್ರೀ ಗುರುದೇವ ಪದವಿ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಶಿಕ್ಷಕ ಹಾಗು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಕಾರ್ಯಕ್ರಮವನ್ನು ಸೌಮ್ಯ ಸ್ವಾಗತಿಸಿ, ಸತೀಶ್ ವಂದಿಸಿ, ಮನುಜ ನಿರೂಪಿಸಿದರು.

LEAVE A REPLY

Please enter your comment!
Please enter your name here