Site icon Suddi Belthangady

ಹೊಸ್ತುಟ ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿಯ ಸದಸ್ಯರಿಗೆ ಸಮವಸ್ತ್ರ ವಿತರಣೆ

ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ ಹೊಸ್ತುಟ ಇದರ ಸದಸ್ಯರಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮವು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅರಸಿನಮಕ್ಕಿ ಇದರ ಸಭಾಂಗಣದಲ್ಲಿ ಪದ್ಮಯ ಗೌಡರ ಅಧ್ಯಕ್ಷತೆಯಲ್ಲಿ ಸೆ.17ರಂದು ನಡೆಯಿತು.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಧೀರ್ ಕುಮಾರ್ ಎಂಎಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಪಂಚಾಯತ್ ಸದಸ್ಯೆ ಪ್ರೇಮ ಚಂದ್ರ, ಸಿಎ ಬ್ಯಾಂಕ್ ನಿರ್ದೇಶಕರಾದ ಮುರಳಿಧರ ಶೆಟ್ಟಿಗಾರ್, ಸುಂದರ ರಾಣ್ಯ ಮುದ್ದಿಗೆ, ತುಂಗ ಗೌಡ, ಭಜನಾ ತರಬೇತುದಾರ ಕೃಷ್ಣಪ್ಪಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Exit mobile version