Site icon Suddi Belthangady

ಕೊಕ್ಕಡ ಗ್ರಾ.ಪಂ ಗೆ ಸರಕಾರದ ಅಧೀನ ಕಾರ್ಯದರ್ಶಿ ವಿಕಾಸ್ ಶ್ರೀವಾಸ್ತವ್ ಭೇಟಿ

ಕೊಕ್ಕಡ: ಕೊಕ್ಕಡ ಗ್ರಾಮ ಪಂಚಾಯತ್ ಗೆ ಶ್ರೀ ವಿಕಾಸ್ ಶ್ರೀವಾಸ್ತವ್, ಸರಕಾರದ ಅಧೀನ ಕಾರ್ಯದರ್ಶಿ, ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇವರು ಸೆ.18ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ನ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಬಳಿ ಗೋ ಶಾಲೆಯ ಗೋಬರ್ ಧನ್ ಘಟಕವನ್ನು ಪರಿಶೀಲಿಸಿ ಘಟಕದ ಕಾರ್ಯ ನಿರ್ವಹಣೆಯ ಬಗ್ಗೆ ಮೆಚ್ಚಗೆ ವ್ಯಕ್ತಪಡಿಸಿದರು.ತದ ನಂತರ ಕೊಕ್ಕಡ ಪಂಚಾಯತ್ ವ್ಯಾಪ್ತಿಯ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಬೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬೇಬಿ, ಉಪಾಧ್ಯಕ್ಷ ಪ್ರಭಾಕರ ಗೌಡ, ಸದಸ್ಯರು, ನಿಕಟ ಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರು, ಮಾನ್ಯ ಕಾರ್ಯನಿರ್ವಹಣಾಧಿಕಾರಿಯಾದ ಕುಸುಮಾಧರ್, AEE ನಿತಿನ್ ಕುಮಾರ್, ಸಹಾಯಕ ಇಂಜಿನಿಯರ್ ಹರ್ಷಿತ್, ಜಿಲ್ಲಾ ಸಂಯೋಜಕರಾದ ಡೊಂಬಯ್ಯ, ಮಹಾಗಣಪತಿ ದೇವಸ್ಥಾನದ ವ್ಯವಸ್ಥಾನಾ ಸಮಿತಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ದೇವಸ್ಥಾನದ ಮಾನ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ಹೆಗ್ಡೆ, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಪಿ.ಕುಶಾಲಪ್ಪ ಗೌಡ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ಎಂ, ಪಂಚಾಯತ್ ಸಿಬ್ಬಂದಿ ಕೇಶವ ರವರು ಉಪಸ್ಥಿತರಿದ್ದರು.

Exit mobile version