Site icon Suddi Belthangady

ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 33ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ-ಬೆಳ್ಳಿ ಕಿರೀಟ ಸಮರ್ಪಣೆ

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ 33 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ.19 ರಂದು ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪ್ರಾರಂಭಗೊಂಡಿತು.

ಬೆಳಿಗ್ಗೆ ದೇವಸ್ಥಾನದಲ್ಲಿ ಗಣಹೋಮ ಬಳಿಕ ಗಣಪತಿ ದೇವರ ಪ್ರತಿಷ್ಠೆ, ಗಣಪತಿ ದೇವರಿಗೆ ಬೆಳ್ಳಿ ಕಿರೀಟ ಸಮರ್ಪಣೆ ನಡೆಯಲಿದೆ.

ಮಧ್ಯಾಹ್ನ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ ವಹಿಸಿದ್ದರು.ಭಾರತೀಯ ಮಜದುರು ಸಂಘದ ಜಿಲ್ಲಾಧ್ಯಕ್ಷ ನ್ಯಾಯವಾದಿ ಅನಿಲ್ ಕುಮಾರ್,ಶ್ರೀ ಕ್ಷೇತ್ರ ಓಡಿಲು ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಿದಾನಂದ ಇಡ್ಯಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಸಮಿತಿಯ ಗೌರವಾಧ್ಯಕ್ಷ ಕೆ. ವಿಜಯ ಸಾಲಿಯಾನ್, ಪ್ರಧಾನ ಕಾರ್ಯದರ್ಶಿ ಸಂತೋಷ್ ಶೆಟ್ಟಿ ಪುರಿಪಟ್ಟ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕೋಶಾಧಿಕಾರಿ ಲಕ್ಷ್ಮೀಕಾಂತ್ ಶೆಟ್ಟಿ.ಮೂಡೈಲು ಸ್ವಾಗತಿಸಿ ಜತೆ ಕಾರ್ಯದರ್ಶಿ ಅಶ್ವಿತ್ ಮೂಲ್ಯ ಓಡಿಲು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಬಳಿಕ ಮಹಾ ಪೂಜೆ, ಪ್ರಸಾದ ವಿತರಣೆ ನಡೆಯಿತು.

Exit mobile version