ಮಿತ್ತಬಾಗಿಲು ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜಾ ಭೇಟಿ

0

ಬೆಳ್ತಂಗಡಿ: ಮಿತ್ತಬಾಗಿಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 39ನೇ ವರ್ಷದ ಶ್ರೀ ಗಣೇಶೋತ್ಸವ ಕೊಲ್ಲಿ ಶ್ರೀ ದುರ್ಗಾದೇವಿ ಕಲಾಮಂದಿರದಲ್ಲಿ ಸೆ.19 ರಂದು ವಿವಿಧ ವೈದಿಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಶ್ರೀ ಗಣೇಶೋತ್ಸವ ಕಾರ್ಯಕ್ರಮಕ್ಕೆ ಶಾಸಕ ಹರೀಶ್ ಪೂಂಜ ಇವರು ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.ಇವರನ್ನು ಸಮಿತಿ ಗೌರವ ಅಧ್ಯಕ್ಷ ಉಮೇಶ್ ಪೂಜಾರಿ ಮಾಲೂರು, ಅಧ್ಯಕ್ಷರಾದ ಸುರೇಶ್ ಪೂಜಾರಿ ಬನದಬಾಗಿಲು, ಕಾರ್ಯದರ್ಶಿಯಾದ ಗುರುಪ್ರಸಾದ್, ಕೋಶಾಧಿಕಾರಿ ನಿತೇಶ್ ಮಣ್ಣಗುಂಡಿ ಬರಮಾಡಿಕೊಂಡರು.

LEAVE A REPLY

Please enter your comment!
Please enter your name here