Site icon Suddi Belthangady

ನ್ಯಾಯತರ್ಪು: ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ

ನ್ಯಾಯತರ್ಪು: ಸೆ.18 ರಂದು ನಾಳ ಅಂಗನವಾಡಿ ಕೇಂದ್ರದ ವತಿಯಿಂದ ಗ್ರಾಮ ಪಂಚಾಯತ್ ಕಳಿಯ ಮತ್ತು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಪೌಷ್ಟಿಕ ಆಹಾರ ಸಪ್ತಹ ಕಾರ್ಯಕ್ರಮ ನಾಳ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ಪುಷ್ಪಾಲತರವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಸುಧಾಕರ ಮಜಲು, ವಲಯ ಮೇಲ್ವಿಚಾರಕಿ ನಂದನ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಪೂಜಾರಿ ನಾಳ, ಗಣ್ಯರಾದ ಸೋಮಪ್ಪ ಗೌಡ ಕುಬಾಯ, ಅಶೋಕ್ ರಾಯಿಮಾರು, ಸೌಭಾಗ್ಯ ರಾಜೇಶ್ ಪಿಜಿನುಕ್ಕು, ರೀತ ಚಂದ್ರಶೇಖರ್, ಆಶಾ ಕಾರ್ಯಕರ್ತೆ ಶಶಿಕಲಾ, ಜಿಲ್ಲಾ ಪ್ರಶಸ್ತಿ ಪುರಸ್ಕೃತ ಅಂಗನವಾಡಿ ಕಾರ್ಯಕರ್ತೆ ನಾಗವೇಣಿ ರಕ್ತೇಶ್ವರಿ ಪದವು ಮತ್ತು ಹಿರಿಯ ನಾಗರಿಕರಾದ ಶ್ರೀಮತಿ ಅಲಿ ಮಮ್ಮ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಾಳ ಅಂಗನವಾಡಿ ಕಾರ್ಯ ವ್ಯಾಪ್ತಿಯ ಮಕ್ಕಳ ಪೋಷಕರು ಸ್ತ್ರೀ ಶಕ್ತಿ ಪದಾಧಿಕಾರಿಗಳು ಉಪಸ್ಥಿತರಿದ್ದು ಪೌಷ್ಟಿಕಾಂಶ ಆಹಾರದ ಬಗ್ಗೆ ವಲಯ ಮೇಲ್ವಿಚಾರಕಿ ನಂದನ ಇವರು ಮಾಹಿತಿ ನೀಡಿದರು.ಮಕ್ಕಳ ತಾಯಂದಿರು, ಸ್ತ್ರೀಶಕ್ತಿ ಸದಸ್ಯರು ವಿವಿಧ ಬಗೆಯ ಪೌಷ್ಟಿಕ ಆಹಾರ ತಯಾರಿಸಿ ತಂದಿದ್ದರು.

ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಶಶಿಕಲಾ, ನವೀನ ಕುಮಾರಿ, ಸಹಾಯಕಿ ಮೋಹಿನಿ ಸಹಕರಿಸಿದರು.ದೀಪ ಬೆಳಗಿಸುವುದರೊಂದಿಗೆ ಕಾರ್ಯಕ್ರಮ ಆರಂಭವಾಯಿತು.ಶಶಿಕಲ ಇವರು ಅತಿಥಿಗಳನ್ನು ಸ್ವಾಗತಿಸಿ, ಧನ್ಯವಾದವಿತ್ತರು.

Exit mobile version