ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ-ಸದಸ್ಯರಿಗೆ ಶೇ.15% ಡಿವಿಡೆಂಡ್

0

ಬೆಳ್ತಂಗಡಿ: ಇಲ್ಲಿಯ ಕುತ್ಯಾರು ದೇವಸ್ಥಾನ ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸಹಕಾರ ಸಂಘದ 25ನೇ ವಾರ್ಷಿಕ ಮಹಾಸಭೆಯು ಸೆ.23ರಂದು ಸಂಘದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಪ್ರಭಾಕರ್ ಹೆಚ್ ಅಧ್ಯಕ್ಷತೆಯಲ್ಲಿ ಜರುಗಿತು.

ಸಂಘದಲ್ಲಿ ಆರ್ಥಿಕ ವರ್ಷದಲ್ಲಿ ರೂ.1566180 ಲಕ್ಷ ಲಾಭ ಗಳಿಸಿ ಸದಸ್ಯರಿಗೆ ಶೇ.15% ಡಿವಿಡೆಂಡ್ ಘೋಷಿಸಿದರು.

ಸಂಘದ ಉಪಾಧ್ಯಕ್ಷ ಸದಾನಂದ ಎಂ., ನಿರ್ದೇಶಕರುಗಳಾದ ವಿಶ್ವನಾಥ್ ಆರ್ ನಾಯಕ್, ಪ್ರಮೋದ್ ಆರ್ ನಾಯಕ್, ಮೋಹನ್ ದಾಸ್ ಕೆ., ಕಿಶೋರ್ ಕುಮಾರ್, ವಿಶ್ವನಾಥ್, ಪಿ. ಜಗನ್ನಾಥ, ರತ್ನಾಕರ, ಸುಮಾ ದಿನೇಶ್, ನಯನ ಶಿವ ಪ್ರಸಾದ್, ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ವರದಿ ಮತ್ತು ಲೆಕ್ಕಪತ್ರ ಮಂಡಿಸಿದರು.ಅಧ್ಯಕ್ಷ ಪ್ರಭಾಕರ್ ಸಿ ಎಸ್ ಸ್ವಾಗತಿಸಿ, ಉಪಾಧ್ಯಕ್ಷ ಸದಾನಂದ ವಂದಿಸಿದರು.

LEAVE A REPLY

Please enter your comment!
Please enter your name here