Site icon Suddi Belthangady

ಮಾಯ ಬೆಳಾಲು ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ

ಬೆಳಾಲು: ಸೆ.23 ರಂದು ಮಾಯಾ ಅಂಗನವಾಡಿ ಕೇಂದ್ರಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಯಶೋಧ ಮುಡ್ರೊಟ್ಟು ಇವರ ಅಧ್ಯಕ್ಷತೆಯಲ್ಲಿ ಪೋಷಣ ಮಾಸ ಆಚರಣೆ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮವನ್ನು ಬೆಳಾಲು ಗ್ರಾಮ ಪಂಚಾಯಿತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿದರು.ಎಚ್ಆರ್ ಧರ್ಮಸ್ಥಳ ಆರೋಗ್ಯ ಕೇಂದ್ರದ ಡಾ.ಮಂಜು ಹಾಗೂ ಕುಮಾರಿ ಪ್ರಮೀಳ ಶಿಕ್ಷಣ ಸಂಯೋಜಕಿ ದಯಳ್ ಬಾಗ್ ಗ್ರಾಮಾಭಿವೃದ್ಧಿ ಬೆಳ್ತಂಗಡಿ ಇವರು ಪೋಷಣ ಅಭಿಯಾನದ ಮಾಹಿತಿಯನ್ನು ನೀಡಿದರು.

ಅತಿಥಿಗಳಾಗಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಜಯಂತಿ , ಮಾಯ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಜಾನ್ಸಿ, ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಸಂಜೀವಿನಿಯ ಎಂಬಿಕೆ ಹರಿಣಾಕ್ಷಿ ಆಶಾ ಕಾರ್ಯಕರ್ತೆ ಪ್ರೇಮ ಮತ್ತು ಶೀಲಾವತಿ, ಅಂಗನವಾಡಿ ಕಾರ್ಯಕರ್ತೆ ಲೋಕಮ್ಮ, ಸಹಾಯಕಿ ಸುಜಾತ ಹಾಗೂ ಶ್ರೀ ಶಕ್ತಿ ಸಂಘದ ಸದಸ್ಯರು ಸಂಜೀವಿನಿ ಸದಸ್ಯರು ದಯಾಳ್ ಬಾಗ್ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬೆಳಾಲು ಗ್ರಾಮ ಪಂಚಾಯಿತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಮಕ್ಕಳಿಗೆ ಬಣ್ಣದ ಪೆನ್ಸಿಲ್ ಹಾಗೂ ಡ್ರಾಯಿಂಗ್ ಪುಸ್ತಕವನ್ನು ಕೊಡುಗೆಯಾಗಿ ನೀಡಿದರು.ಅಂಗನವಾಡಿ ಕಾರ್ಯಕರ್ತೆ ಲೋಕಮ್ಮ ಕಾರ್ಯಕ್ರಮ ನಿರೂಪಿಸಿ, ಸ್ತ್ರೀಶಕ್ತಿ ಸಂಘದ ಸದಸ್ಯರಾದ ಸುಕನ್ಯಾ ಸ್ವಾಗತಿಸಿ, ಹರಿಣಾಕ್ಷಿ ವಂದಿಸಿದರು.

ಈ ಸಂದರ್ಭದಲ್ಲಿ ಸಂಘದ ಸದಸ್ಯರು ಹಾಗೂ ಮಕ್ಕಳ ಹೆತ್ತವರು ಮಾಡಿದ ವಿವಿಧ ತಿಂಡಿ ತಿನಸುಗಳ ಪ್ರದರ್ಶನ ನಡೆಯಿತು.

Exit mobile version