ಉಜಿರೆ ಎಸ್.ಡಿ.ಎಂ ಪ.ಪೂ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಗೀತೆಗಳ ಗಾಯನ ಕಾರ್ಯಾಗಾರ

0

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸ್ವಯಂ ಸೇವಕರಿಗೆ ರಾಷ್ಟ್ರೀಯ ಸೇವಾ ಯೋಜನೆಯ ಗೀತೆಗಳ ಗಾಯನ ಕಾರ್ಯಾಗಾರ ನಡೆಯಿತು.

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ (ಸ್ವಾಯತ್ತ) ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಾದ ಅಂಜನಾ, ಅಭಿಷೇಕ್, ವಿನುತಾ ಹಾಗೂ ವೀಕ್ಷಾ ಅವರು ರಾಷ್ಟ್ರೀಯ ಸೇವಾ ಯೋಜನೆಯ ವಿವಿಧ ಗೀತೆಗಳ ಗಾಯನ ಕಾರ್ಯಾಗಾರ ನಡೆಸಿದರು.

ಯೋಜನಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ ಸ್ವಾಗತಿಸಿದರು.ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್, ಘಟಕದ ನಾಯಕ ಸುದರ್ಶನ ನಾಯಕ್ ಉಪಸ್ಥಿತರಿದ್ದರು.ಘಟಕದ ನಾಯಕಿ ದಕ್ಷಾ ವಂದಿಸಿದರು.

LEAVE A REPLY

Please enter your comment!
Please enter your name here