Site icon Suddi Belthangady

ಧರ್ಮಸ್ಥಳದಲ್ಲಿ 25ನೇ ವರ್ಷದ ಭಜನಾ ತರಬೇತಿ ಕಮ್ಮಟ ಉದ್ಘಾಟನೆ

ಧರ್ಮಸ್ಥಳ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಶ್ರೀ ಕ್ಷೇತ್ರ ಧರ್ಮಸ್ಥಳದ 25 ನೇ ವರ್ಷದ ಭಜನಾ ತರಬೇತಿ ಕಮ್ಮಟ ಸೆ.28 ರಂದು ಅಮೃತವರ್ಷಿಣಿ ಸಭಾ ಭವನದಲ್ಲಿ ಉದ್ಘಾಟನೆಗೊಂಡಿತು.

ಮಂಡ್ಯದ ಶ್ರೀ ಕ್ಷೇತ್ರ ಆರತಿಪುರದ ಸ್ವಸ್ತಿಶ್ರೀ ಸಿದ್ದಂತಾ ಕೀರ್ತಿ ಮಹಾ ಸ್ವಾಮೀಜಿ ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ವಹಿಸಿದ್ದರು.

ಮಾಣಿಲಾ ಶ್ರೀ ಧಾಮದ ಶ್ರೀ ಮೋಹನದಾಸ ಸ್ವಾಮೀಜಿ, ಶುಭ ಸಂದೇಶಗೈದರು. ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆ, ಭಜನಾ ಪರಿಷತ್ ಅಧ್ಯಕ್ಷ ಬಾಲಕೃಷ್ಣ ಪಂಜ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಭಜನಾ ಪರಿಷತ್ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.ಭಜನಾ ಕಮ್ಮಟದ ಕಾರ್ಯದರ್ಶಿ ಸುರೇಶ ಮೊಯಿಲಿ ವರದಿ ವಾಚಿಸಿದರು.ಭಜನಾ ಪರಿಷತ್ ಕಾರ್ಯದರ್ಶಿ ಪುರುಷೋತ್ತಮ.ಪಿ.ಕೆ ವಂದಿಸಿದರು.ಡಾ.ಐ. ಶಶಿಕಾಂತ ಜೈನ್ ಸ್ವಸ್ತಿ ಮಂತ್ರ ಪಠಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶ್ರೀನಿವಾಸ ನಿರೂಪಿಸಿದರು.

ಸಭೆಯಲ್ಲಿ ಶಿಬಿರಾರ್ಥಿಗಳಿಗೆ ಕಿಟ್ ವಿತರಣೆ ಮಾಡಲಾಯಿತು.ಶ್ರೀ ಕ್ಷೇತ್ರ ಧರ್ಮಸ್ಥಳದ ವಿವಿಧ ಇಲಾಖೆಯ ಮುಖ್ಯಸ್ಥರು, ಸಿಬ್ಬಂದಿಗಳು, ಶಿಬಿರಾರ್ಥಿಗಳು ಹಾಜರಿದ್ದರು.

Exit mobile version