Site icon Suddi Belthangady

ಕಾಶಿಬೆಟ್ಟು: ಲಾರಿ ಹಾಗೂ ತರಕಾರಿ ವಾಹನದ ನಡುವೆ ಪರಸ್ಪರ ಡಿಕ್ಕಿ- ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು ಭೇಟಿ

ಬೆಳ್ತಂಗಡಿ: ಸೆ.29 ರಂದು ಬೆಳಗ್ಗಿನ ಜಾವ ಬೆಳ್ತಂಗಡಿ ಕಡೆಯಿಂದ ಉಜಿರೆ ಕಡೆಗೆ ಸಂಚಾರಿಸುತ್ತಿದ್ದ ತರಕಾರಿ ವಾಹನ ಮತ್ತು ಉಜಿರೆ ಕಡೆಯಿಂದ ಬೆಳ್ತಂಗಡಿ ಕಡೆಗೆ ಸಂಚರಿಸುತ್ತಿದ್ದ ಲಾರಿ ನಡುವೆ ಕಾಶಿಬೆಟ್ಟುವಿನ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ತರಕಾರಿ ವಾಹನದ ಮುಂದಿನ ಭಾಗವು ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನ ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪೊಲೀಸರು ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

Exit mobile version