Site icon Suddi Belthangady

ಬಡಕೋಡಿ ಶಾಲೆಯಲ್ಲಿ ನನ್ನ ನೆಲ-ನನ್ನ ಜಲ ಸಪ್ತಾಹ, ಗಿಡಗಳ ಪುನರ್ಚೇತನ

ಹೊಸಂಗಡಿ: ಗ್ರಾಮ ಪಂಚಾಯತ್ ಹೊಸಂಗಡಿ ಮತ್ತು ವಿವಿಧ ಸಂಘಸಂಸ್ಥೆಗಳ ಸಹಭಾಗಿತ್ವದೊಂದಿಗೆ ನೆಲ ಜಲ ಸಂರಕ್ಷಣೆಗಾಗಿ ಹಮ್ಮಿಕೊಂಡಿರುವ ನನ್ನ ಗಿಡ-ನನ್ನ ಮರ ನನ್ನ ನೆಲ-ನನ್ನ ಜಲ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಸೆ.29 ರಂದು ಬಡಕೊಡಿ ಶಾಲಾ ವಠಾರದಲ್ಲಿ ಗಿಡಗಳ ಪುನರ್ಚೇತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ, ಸದಸ್ಯರಾದ ಕರುಣಾಕರ ಪೂಜಾರಿ, ಪ್ರಮೀಳಾ, ಲೋಕೇಶ್, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಶಂಕರ ಪೂಜಾರಿ, ಸದಸ್ಯರು, ಮುಖ್ಯ ಶಿಕ್ಷಕರು, ಸಹಶಿಕ್ಷಕರು, ಪಂಚಾಯತ್ ಸಿಬ್ಬಂದಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Exit mobile version