Site icon Suddi Belthangady

ರೋಟರಿ ಕ್ಲಬ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ- 145 ವಿದ್ಯಾರ್ಥಿಗಳಿಗೆ ರೂ.10.26 ಲಕ್ಷ ವಿತರಣೆ

ಉಜಿರೆ: ರೋಟರಿ ಕ್ಲಬ್ ಇಂದಿರಾ ನಗರ, ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಸೇವಾ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ಪ್ರತಿಭಾವಂತ 145 ವಿದ್ಯಾರ್ಥಿಗಳಿಗೆ ರೂ.10.26 ಲಕ್ಷ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಸೆ.30 ರಂದು ಕಾಶಿಬೆಟ್ಟು ಅರಳಿ ರೋಟರಿ ಸುವರ್ಣ ಸಭಾಭವನದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ರೋಟರಿ ಕ್ಲಬ್ ಜಿಲ್ಲಾ ನಿರ್ದೇಶಕ ಕೃಷ್ಣ ಶೆಟ್ಟಿ ಕೆ., ಪಡುವೆಟ್ನಾಯ ಫ್ಯಾಮಿಲಿ ಟ್ರಸ್ಟ್ ಕೋಶಾಧಿಕಾರಿ ಶ್ರೀಧರ ಪಡುವೆಟ್ನಾಯ, ಬೆಂಗಳೂರು ಇಂದಿರಾ ಗಾಂಧಿ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ರಂಜಿತ್ ಸಿಂಗ್ ಗುಲಾಟಿ, ಜಗದೀಶ್ ಎಂ., ಡಾ.ಕೃಷ್ಣನ್ ಮೆನನ್, ರೋಟರಿ ವಲಯ ಸೇನಾನಿ ಯಶವಂತ ಪಟವರ್ಧನ್, ಬೆಳ್ತಂಗಡಿ ರೋಟರಿ ಕ್ಲಬ್ ಛೇರ್ಮನ್ ಡಿ.ಎಂ.ಗೌಡ, ರೋಟರಿ ಅನ್ಸ್ ಕ್ಲಬ್ ಅಧ್ಯಕ್ಷೆ ಡಾ.ಅನಿತಾ ದಯಕರ್, ಬೆಳ್ತಂಗಡಿ ಸ.ಪ.ಪೂ.ಕಾಲೇಜು ಪ್ರಾಂಶುಪಾಲ ಸುಕುಮಾರ್ ಭಾಗವಹಿಸಿದ್ದರು.

ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ವಹಿಸಿದ್ದರು.ರೋಟರಿ ಕ್ಲಬ್ ಇಂದಿರಾ ನಗರದ ಅಧ್ಯಕ್ಷ ಎನ್.ಬಾಲಕೃಷ್ಣನ್, ಕಾರ್ಯದರ್ಶಿ ಎನ್.ಗೋಪಿನಾಥ, ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ವಿದ್ಯಾ ಕುಮಾರ್ ಕಾಂಚೋಡು, ರೋಟರಿ ಸೇವಾ ಟ್ರಸ್ಟ್ ಅಧ್ಯಕ್ಷ ಮೇಜರ್ ಜನರಲ್ ಎಂ.ವಿ.ಭಟ್, ರೋಟರಿ ಕ್ಲಬ್ ಪದಾಧಿಕಾರಿಗಳು, ಸದಸ್ಯರು, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಬೆಳ್ತಂಗಡಿ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಧನಂಜಯ ರಾವ್ ಬಿ.ಕೆ ಕಾರ್ಯಕ್ರಮ ನಿರೂಪಿಸಿದರು.

Exit mobile version