ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ತೇಜಲ್ ಕೆ.ಆರ್ ಮುಂಡಾಜೆ ರವರಿಗೆ ಬೆಳ್ಳಿ ಪದಕ

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ನಿವಾಸಿ ತೇಜಲ್ ಕೆ.ಆರ್ ಇವರು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ 2023 ಸೆಪ್ಟಂಬರ್ 27 ರಿಂದ 30 ರವರೆಗೆ ನಡೆದ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 18 ವರ್ಷದೊಳಗಿನ ಬಾಲಕರ 110 ಮೀಟರ್ ಹರ್ಡಲ್ಸ್ ನಲ್ಲಿ ಬೆಳ್ಳಿಯ ಪದಕ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರು.

ಇವರು ಮುಂಡಾಜೆ ನಿವಾಸಿಗಳಾದ ರಾಜೇಶ್ ಕೆ.ವಿ ಹಾಗೂ ಜಿನ್ಸಿ ಇವರ ಪುತ್ರನಾಗಿದ್ದು, ಪ್ರಸ್ತುತ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಕ್ರೀಡಾ ವಿದ್ಯಾರ್ಥಿಯಾಗಿದ್ದು ತರಬೇತುದಾರರಾದ ಶಾಂತರಾಮ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ.

LEAVE A REPLY

Please enter your comment!
Please enter your name here