Site icon Suddi Belthangady

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾ ಹೀ ಸೇವಾ ವಿಶೇಷ ಕಾರ್ಯ

ಉಜಿರೆ: ಸ್ವಚ್ಛತಾ ಹೀ ಸೇವಾ ವಿಶೇಷ ಆಂದೋಲನದ ಅಂಗವಾಗಿ, ಗಾಂಧಿ ಜಯಂತಿಯ ಮುನ್ನಾ ದಿನವಾದ ಅ.1 ರಂದು ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡೆಕೊಟ್ಟು-ಪಾಣ್ಯಾಲು ಕೊರಗರ ಕಾಲನಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನದಡಿ ಶ್ರಮದಾನವನ್ನು ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಉತ್ಸಾಹದಲ್ಲಿ ಪಾಲ್ಗೊಂಡು, ಸ್ವಚ್ಛತಾ ಶ್ರಮದಾನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡರು.

ಬಳಿಕ, ಸ್ವಚ್ಛತಾ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು.

ಗ್ರಾಮ ಪಂಚಾಯತ್‌ ಉಪಾಧ್ಯಕ್ಷರು ರವಿ ಕುಮಾರ್‌, ತಾಲೂಕು ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್‌, ಲೆಕ್ಕಸಹಾಯಕ ಗಣೇಶ್‌ ಪೂಜಾರಿ, ಉಜಿರೆ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಪ್ರಕಾಶ್‌ ಶೆಟ್ಟಿ, ಕಾರ್ಯದರ್ಶಿ ಶ್ರವಣ್‌ ಕುಮಾರ್‌ ರವರು ಉಪಸ್ಥಿತರಿದ್ದರು.

Exit mobile version