Site icon Suddi Belthangady

ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್ ವತಿಯಿಂದ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆ

ಬೆಳ್ತಂಗಡಿ: ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್ ಪುತ್ತೂರು ಇದರ ಆಶ್ರಯದಲ್ಲಿ ಈ ವರ್ಷದ ಗಣೇಶೋತ್ಸವದ ಅಂಗವಾಗಿ ನಡೆದ ಬಣ್ಣದ ಗಜಮುಖ-23 ಸಾರ್ವಜನಿಕ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆಯು ನೆಹರು ನಗರದ ಕಛೇರಿಯಲ್ಲಿ ನಡೆಯಿತು.

ಒಟ್ಟು43 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.ವಿಜೇತರಿಗೆ ನೆನಪಿನ ಕಾಣಿಕೆ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಅದೇ ರೀತಿ ಭಾಗವಹಿಸಿದ ಪ್ರತಿ ಸದಸ್ಯರಿಗೆ ಅಭಿನಂದನ ಪತ್ರ ನೀಡುವ ಮೂಲಕ ಎಲ್ಲಾ ಸ್ಪರ್ಧಾಳುಗಳನ್ನು ಪ್ರೋತ್ಸಾಹಿಸಲಾಯಿತು.

ಈ ಸಂದರ್ಭದಲ್ಲಿ ಗ್ರೂಪ್ ನ ಸದಸ್ಯರಾದ ಮನ್ಮಥ ಶೆಟ್ಟಿ ಪುತ್ತೂರು, ಯೋಗೀಶ್ ಅಳಕೆ,ಪ್ರವೀಣ್ ಕೊಯಿಲ,ಪ್ರಸಾದ್ ಕೊಯಿಲ,ರಾಜೇಶ್ ಕುಲಾಲ್,ಪ್ರಕಾಶ್ ಮಿತ್ತೂರು,ದಾಮೋದರ ಪರಮಾರ್, ಸುಪ್ರೀತ್ ಕೊಯಿಲ, ಶ್ರೀನಿಧಿ ಸುಳ್ಯ ಉಪಸ್ಥಿತರಿದ್ದರು.

Exit mobile version