Site icon Suddi Belthangady

ತಾಲೂಕು ಔಷಧಿ ವ್ಯಾಪಾರಸ್ಥರ‌ ಸಂಘದ ವತಿಯಿಂದ ಜಾಗತಿಕ ಔಷಧ ತಜ್ಞರ ದಿನ

ಉಜಿರೆ: ಬೆಳ್ತಂಗಡಿ ತಾಲೂಕು ಔಷಧ ವ್ಯಾಪಾರಸ್ಥರು ಸಂಘದಆಶ್ರಯದಲ್ಲಿ ಜಾಗತಿಕ ಔಷಧ ತಜ್ಞರ ದಿನದ ಆಚರಣೆ ಅ.1 ರಂದು ಉಜಿರೆಯ ಕಾಶಿಬೆಟ್ಟಿನ ಅರಳಿ ರಸ್ತೆ ರೋಟರಿ ಸೇವಾ ಭವನದಲ್ಲಿ ನಡೆಯಿತು.

ಬೆಳ್ತಂಗಡಿ ಔಷಧಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಶ್ರೀಧರ ಕೆ.ವಿ , ಮಂಗಳೂರಿನ ಸಹಾಯಕ ಔಷಧ ನಿಯಂತ್ರಕ ಉದಯ ಕಿಶೋರ್ ಉದ್ಘಾಟಿಸಿದರು.

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದ ಗೌರವ ಕಾರ್ಯದರ್ಶಿ ಎ.ಕೆ ಜೀವನ್ , ಹಿರಿಯ ನಿವೃತ್ತ ಸರಕಾರಿ ಫಾರ್ಮಸಿಸ್ಟ್ ಜನಾರ್ದನ ಮಂಗಳೂರು, ಸೌತ್ ಕೆನೆರಾ ಡಿಸ್ಟ್ರಿಕ್ಟ್‌ ಕೆಮಿಸ್ಡ್ ಎಂಡ್ ಡ್ರಗ್ಗಿಸ್ಟ್ ಅಸೋಸಿಯೇಷನ್ ನ ಅಧ್ಯಕ್ಷ ಸುಜಿತ್ ಭಿಡೆ, ಕಾರ್ಯದರ್ಶಿ‌ ಗುರುಚರಣ್ರಾವ್, ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದ ಕಾರ್ಯದರ್ಶಿ ಮಾಧವ ಗೌಡ, ಕೋಶಾಧಿಕಾರಿ ಗಣಪತಿ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಹಾಯಕ ಔಷಧ ನಿಯಂತ್ರಕರಾದ ಉದಯ ಕಿಶೋರ್ ಅವರು ಕಾರ್ಯಕ್ರಮವನ್ನು ಉದ್ಗಾಟಿಸಿ ಮಾಡುವ ಕೆಲಸವನ್ನು ನಗು ನಗುತಾ ಮಾಡಿ ನೀವು ಮಾಡುವ ಕೆಲಸದ ಬಗ್ಗೆ ಹೆಮ್ಮೆ ಇರಲಿ ಎಂದು ಹೇಳಿದರು.

ನಂತರ ಹಿರಿಯ ಫಾರ್ಮಸಿಸ್ಟ್ ಆಗಿರುವ ಬಿ.ಎಂ.ಮೆಡಿಕಲ್ಸ್ ನ ರಮಾನಂದ ಹಾಗೂ ಹಿರಿಯ ಔಷಧಿ ವ್ಯಾಪಾರಿ ನಾರಾವಿಯ ಗಣೇಶ್ ಮೆಡಿಕಲ್ಸ್ ನ ಶ್ರೀ ರವಿಪ್ರಸಾದ್ ಅವರನ್ನು ಸನ್ಮಾನಿಸಲಾಯಿತು.

ಅದೇ ರೀತಿ ಆರೋಗ್ಯ ಕ್ಷೇತ್ರದಲ್ಲಿ 50 ವರ್ಷದಿಂದ ವ್ಯಾಪಾರ ಮಾಡುತ್ತಿರುವ ಅಮರ್ ಡ್ರಗ್ ಹೌಸ್ ಮಾಲಕರಾದ ಗಣಪತಿ ಭಟ್,ಹಾಗೂ ಧರ್ಮಸ್ಥಳದ ಅನ್ನ ಪೂರ್ಣ ಮೆಡಿಕಲ್ಸ್ ನ ರಜತ್ ರಾವ್ ಅವರನ್ನು ಸನ್ಮಾನಿಸಲಾಯಿತು.

ಕಳೆದ ಆರು ವರ್ಷಗಳಿಂದ ತನ್ನ ಔಷಧ ವ್ಯಾಪಾರದ ಜೊತೆಗೆ ಆನಾರೋಗ್ಯ ಪೀಡಿತರ ಮನೆಗೆ ತೆರಳಿ ಚಿಕಿತ್ಸೆ ನೀಡುತ್ತಿರುವ ಉಜಿರೆಯ ಎಸ್ ಎ ಮೆಡಿಕಲ್ಸ್ ನ ಮಾಲಕ ಪ್ರಕಾಶ್ ಫರ್ನಾಂಡಿಸ್ ಗೌರವಿಸಲಾಯಿತು.

ಇದೇ ಸಂಧರ್ಭದಲ್ಲಿ ತಾಲೂಕಿನ 10 ಜನ ದೈಹಿಕ ಅಶಕ್ತರನ್ನು ಗುರುತಿಸಿ ಅವರಿಗೆ ಧನಸಹಾಯ ಮಾಡಲಾಯಿತು.

ಈ ಸಂಧರ್ಭದಲ್ಲಿ ಪಶು ಸಂಗೋಪನಾ ಇಲಾಖೆಗೆ ಸಂಘದ ವತಿಯಿಂದ ಆಂಟಿ ರೇಬೀಸ್ ಲಸಿಕೆಗಳನ್ನು ಹಸ್ತಾಂತರಿಸಲಾಯಿತು.

ನಿಕಟ ಪೂರ್ವ ಅಧ್ಯಕ್ಷ ಎಂ. ಚಂದ್ರಶೇಖರ ಹಾಗೂ ನಿಕಟ ಪೂರ್ವ ಕಾರ್ಯದರ್ಶಿ ರಘುನಾಥ ದಾಮ್ಲೆ ಅವರನ್ನು ಅಭಿನಂದಿಸಲಾಯಿತು.

ಇದೇ ಸಂಧರ್ಭದಲ್ಲಿ ಸಂಘದ ಸದಸ್ಯರಿಗೆ ಔಷದೀಯ ಸಸ್ಯಗಳನ್ನು ಹಸ್ತಾಂತರಿಸಲಾಯಿತು.ಕಾರ್ಯಕ್ರಮವು ಸನ್ನಿಧಿ ಮೆಡಿಕಲ್ಸ್ ನ ಅಶ್ವಿನಿಯವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು.ಸುಜಿತ್ ಭಿಡೆ ಸ್ವಾಗತಿಸಿದರು.ಕು.ಬಿಂದಿಯಾ ಕಾರ್ಯಕ್ರಮವನ್ನು ನಿರೂಪಿಸಿ , ಉದಯ ಕುಮಾರ ಜೈನ್ ಅವರು ವಂದಿಸಿದರು.

Exit mobile version