Site icon Suddi Belthangady

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

ಬಳಂಜ: ಜಿಲ್ಲೆಯ ಹೆಸರಾಂತ ಕುಣಿತ ಭಜನಾ ಮಂಡಲಿಗಳಲ್ಲಿ ಒಂದಾದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ಸಭೆಯು ಇತ್ತೀಚೆಗೆ ನಡೆಯಿತು.

ಈ ಸಂದರ್ಭದಲ್ಲಿ ಮುಂದಿನ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಕುಮಾರಿ ಜ್ಯೋತಿ ಮಜ್ಜೆನಿ, ಕಾರ್ಯದರ್ಶಿಯಾಗಿ ಕುಮಾರಿ ಅನುಕ್ಷಾ, ಜೊತೆ ಕಾರ್ಯದರ್ಶಿಯಾಗಿ ಕುಮಾರಿ ಪ್ರತೀಕ್ಷಾ, ಕೋಶಾಧಿಕಾರಿಯಾಗಿ ಕುಮಾರಿ ತೇಜಸ್ವಿನಿಯವರನ್ನು ಆಯ್ಕೆ ಮಾಡಲಾಯಿತು.

ಮಂಡಳಿಯಲ್ಲಿ ಒಟ್ಟು 35 ಮಂದಿ ಸದಸ್ಯರಿದ್ದು ಎಲ್ಲರನ್ನು ಕಾರ್ಯಕಾರಿ ಸಮಿತಿಗೆ ಸೇರಿಸಲಾಯಿತು.

ಸಮಾಜ ಸೇವಕರಾದ ಹರೀಶ್ ವೈ ಚಂದ್ರಮ ಇವರ ಪರಿಕಲ್ಪನೆ ಮತ್ತು ಸಂಚಾಲಕತ್ವದಲ್ಲಿ ರೂಪುಗೊಂಡ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಈಗಾಗಲೇ ಇನ್ನೂರಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನೀಡಿ ಜನ ಮನ್ನಣೆ ಗಳಿಸಿದೆ.

Exit mobile version